ನವದೆಹಲಿ:ದೇಶದಲ್ಲಿ ಪ್ರತಿದಿನದ ಕೋವಿಡ್​ 19 ಪರೀಕ್ಷಾ ಸಾಮರ್ಥ್ಯವನ್ನು 95 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್​ ತಿಳಿಸಿದ್ದಾರೆ.
ಈಶಾನ್ಯ ರಾಜ್ಯಗಳಲ್ಲಿನ ಕರೊನಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಈ ಮಾಹಿತಿ ನೀಡಿದ್ದು, ಇದುವರೆಗೆ 332 ಸರ್ಕಾರಿ ಮತ್ತು 121 ಖಾಸಗಿ ಪ್ರಯೋಗಾಲಯಗಳ ಸಹಾಯದಿಂದ ದೇಶಾದ್ಯಂತ ಒಟ್ಟು 15.25 ಲಕ್ಷ (15,25,631) ಜನರಿಗೆ ಕೋವಿಡ್​ ಪರೀಕ್ಷೆ ಮಾಡಿರುವುದಾಗಿ ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿ ಶನಿವಾರ 41 ಹೊಸ ಕೋವಿಡ್​ ಪ್ರಕರಣಗಳು, ಒಟ್ಟು ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ತಂಬಾಕು ಆಧಾರಿತ ಪದಾರ್ಥ ತಿಂದು ಉಗುಳುವುದನ್ನು ನಿರ್ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ತನ್ಮೂಲಕ ಕರೊನಾ ಹರಡುವಿಕೆಯನ್ನು ತಡೆಗಟ್ಟಲಾಗುವುದು ಎಂದು ತಿಳಿಸಿದರು.
ಅರುಣಾಚಲಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಲ್ಯಾಂಡ್​, ತ್ರಿಪುರ ಮತ್ತು ಸಿಕ್ಕಿಂ ರಾಜ್ಯದ ಅಧಿಕಾರಿಗಳು ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ಮೇಲೆ ಮಿತಿಮೀರಿದೆ ದೌರ್ಜನ್ಯ- ಕಳೆದ ತಿಂಗಳ ಪಟ್ಟಿ ನೋಡಿ…ಈಶಾನ್ಯ ರಾಜ್ಯದ ಬಹುತೇಕ ಪ್ರದೇಶಗಳು ಹಸಿರು ವಲಯದಲ್ಲಿ ಇರುವುದನ್ನು ನೋಡಲು ಸಂತೋಷವಾಗುತ್ತಿದೆ. ಅಸ್ಸಾಂ ಮತ್ತು ತ್ರಿಪುರದಲ್ಲಿ ಮಾತ್ರ ಕರೊನಾದ ಸಕ್ರಿಯ ಪ್ರಕರಣಗಳಿವೆ. ಉಳಿದ ರಾಜ್ಯಗಳೆಲ್ಲವೂ ಹಸಿರು ವಲಯದಲ್ಲಿವೆ. ಈ ಪ್ರದೇಶಗಳಲ್ಲಿರುವ ಕಿತ್ತಳೆ ವಲಯವನ್ನು ಹಸಿರು ವಲಯವಾಗಿ ಪರಿವರ್ತಿಸಲು ಪ್ರಯತ್ನಿಸಬೇಕು ಎಂದು ಈಶಾನ್ಯ ರಾಜ್ಯದ ಅಧಿಕಾರಿಗಳಿಗೆ ತಿಳಿಸಿದರು.
ತ್ರಿಪುರದಾದಲ್ಲಿ 118, ಅಸ್ಸಾಂನಲ್ಲಿ 59, ಮೇಘಾಲಯದಲ್ಲಿ 12 ಮತ್ತು ಮಣಿಪುರ ಹಾಗೂ ಮಿಜೋರಾಂನಲ್ಲಿ ತಲಾ ಒಂದೊಂದು ಕರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ.
ಷಾ ಆರೋಗ್ಯದ ಬಗ್ಗೆ ರೂಮರ್: ಗುಜರಾತಿನ ನಾಲ್ವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 9 =
Remember me
