ತಮಿಳುನಾಡು:ತಮಿಳುನಾಡಿನಲ್ಲಿ ಪಟಾಕಿ ಗೋದಾಮಿನಲ್ಲಿ ಮಹಾ ಸ್ಪೋಟ ಸಂಭವಿಸಿದ್ದು ಅಪಾರ ಆಸ್ತಿ ಪಾಸ್ತಿ ನಷ್ಟವಾಗಿದೆ.
ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದ್ದು ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಉಂಟಾಗಿ ಭಾರಿ ಸ್ಫೋಟ ಉಂಟಾಗಿದ್ದು ಒಂಬತ್ತು ಮಂದಿಯ ದಾರುಣ ಸಾವು ಸಂಭವಿಸಿದೆ. ಈ ಭಾರಿ ದುರಂತದಲ್ಲಿ ನೂರಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳು ಉಂಟಾಗಿದೆ.

ಗೋಡೌನ್​ನಲ್ಲಿ ಲೋಡ್ ಮಾಡಿ ಇಟ್ಟಿದ್ದ ಪಟಾಕಿಗಳನ್ನು ಇಡಲಾಗಿದ್ದು ಈ ವೇಳೆ ಇಡೀ ಮಳಿಗೆಯೇ ಸ್ಫೋಟಗೊಂಡಿದೆ. ಇದರಿಂದಾಗಿ ಅಕ್ಕಪಕ್ಕದ ಏಳೆಂಟು ಮನೆಗಳು ಸಂಪೂರ್ಣ ಧ್ವಂಸವಾಗಿದ್ದು ಗಾಯಾಳುಗಳನ್ನ ಕೃಷ್ಣ ಗಿರಿಯ ಮೆಡಿಕಲ್ ಕಾಲೇಜಗೆ ರವಾನೆ ಮಾಡಲಾಗಿದೆ. ತಕ್ಷಣ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳ ದೌಡಾಯಿಸಿದ್ದು ಪರಿಸ್ಥಿತಿಯನ್ನು ಹತೋಟಿಗೆ ತರಲು ಶ್ರಮಿಸುತ್ತಿದ್ದಾರೆ.
ಗಾಯಗೊಂಡವರನ್ನು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಗೋಡೌನ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ಶೇಖರಣೆ ಮಾಡಿ ಇಡಲಾಗಿತ್ತು. ಇಂದು ಬೆಳಗ್ಗೆ ಸುಮಾರು 9.30ರ ಸುಮಾರಿಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದರಿಂದಾಗಿ ಏಕಾಏಕಿ ಪಟಾಕಿ ಗೋಡೌನ್ ಸ್ಪೋಟಗೊಂಡಿದೆ. ಇದರಿಂದಾಗಿ ಸುತ್ತಮುತ್ತಲಿನ ಏಳೆಂಟು ಮನೆಗಳಿಗೆ ಭಾರಿ ಹಾನಿ ಸಂಭವಿಸಿದೆ. ಜನನಿಬಿಡ ಪ್ರದೇಶದಲ್ಲಿ ಈ ಗೋದಾಮು ಇದ್ದಿದ್ದರಿಂದ ಭಾರಿ ಪ್ರಮಾಣದ ಹಾನಿ ಸಂಭವಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
