ಬೆಂಗಳೂರು: ಕೇರಳದಲ್ಲಿ ಸುರಿದ ಧಾರಕಾರ ಮಳೆಗೆ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ಇದೀಗ ಮೃತಪಟ್ಟವರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಮಣ್ಣಿನಡಿ ಇನ್ನೂ ನೂರಾರು ಮಂದಿ ಸಿಲುಕಿದ್ದು, ಸುಳಿವು ಸಿಗದಂತೆ ಕಣ್ಮರೆಯಾಗಿದ್ದಾರೆ. ಒಂದೇ ಕುಟುಂಬದ ಹಲವರು ದುರಂತ ಸಾವು ಕಂಡಿದ್ದು, ಮೃತರ ದೇಹ ಹೊರತೆಗೆಯಲು ರಕ್ಷಣಾ ಪಡೆ ಹರಸಾಹಸ ಪಡುತ್ತಿದೆ.
ಇದನ್ನೂ ಓದಿ:ರಸ್ತೆ ತೆರಿಗೆ ವಂಚಕರ ಮೇಲೆ ಕ್ರಿಮಿನಲ್ ಕೇಸ್; ವಾಹನ ಸರೆಂಡರ್ ಹೆಸರಲ್ಲಿ ಟೋಪಿ
ಭೂದುರಂತದಲ್ಲಿ ನಾಪತ್ತೆಯಾದವರ ಸಂಖ್ಯೆಯನ್ನು ಕಂಡುಹಿಡಿಯಲು ಇದೀಗ ಜಿಲ್ಲಾಧಿಕಾರಿಗಳು ಡೇಟಾವನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಷ್ಟು ಜನರು ಮಣ್ಣಿನಡಿಯಲ್ಲಿ ಸಿಲುಕಿರಬಹುದು ಎಂಬುದನ್ನು ಸರಿಯಾಗಿ ತಿಳಿಯಲು ಜಿಲ್ಲಾಡಳಿತ ಅಧಿಕಾರಿಗಳು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ತಾತ್ಕಾಲಿಕ ಸೇತುವೆ ಬಳಸಿ ಇಲ್ಲಿಯವರೆಗೆ 1000ಕ್ಕಿಂತ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಿರುವ ಭಾರತೀಯ ಸೇನೆ, ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಟಿ20 ಕ್ರಿಕೆಟ್​ನಲ್ಲಿ ಈ ಐತಿಹಾಸಿಕ ದಾಖಲೆ ಬರೆದ 2ನೇ ಕ್ರಿಕೆಟಿಗ ರಶೀದ್​ ಖಾನ್​! ಅಭಿನಂದನೆಗಳ ಸುರಿಮಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
