ಅಲಹಾಬಾದ್:ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅವುಗಳಿಗೆ ಮೂಲಭೂತ ಹಕ್ಕು ನೀಡಿ ಎಂದು ಅಲಹಾಬಾದ್ ಹೈ ಕೋರ್ಟ್ ಬುಧವಾರ ಮಹತ್ವದ ಸೂಚನೆ ನೀಡಿದೆ. ಗೋ ಹತ್ಯೆ ಆರೋಪದಲ್ಲಿ ಜಾವೇದ್ ಎಂಬಾತನಿಗೆ ಜಾಮೀನು ನಿರಾಕರಿಸುವ ವೇಳೆ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಹೈ
ಕೋರ್ಟ್​ನ ಈ ನಿಲುವು ದೇಶದಲ್ಲಿ ಗೋರಕ್ಷಣೆ ಕುರಿತ ದನಿಗೆ ಹೆಚ್ಚಿನ ಬಲ ನೀಡುವ ನಿರೀಕ್ಷೆಯಿದೆ.
‘ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಧಕ್ಕೆಯಾದಾಗ ಇಡೀ ದೇಶ ದುರ್ಬಲವಾಗುತ್ತದೆ ಎಂಬುದು ನಮಗೆ ಗೊತ್ತಿದೆ’ ಎಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಳಿದರು. ಮೂಲಭೂತ ಹಕ್ಕು ಗೋಮಾಂಸ ತಿನ್ನುವವರಿಗೆ ಮಾತ್ರ ಸಂಬಂಧಿಸಿದ್ದಲ್ಲ. ಗೋವನ್ನು ಪೂಜಿಸುವವರು ಆರ್ಥಿಕವಾಗಿ ಅದನ್ನು ಅವಲಂಬಿಸಿರುತ್ತಾರೆ. ಅವರಿಗೂ ಅರ್ಥಪೂರ್ಣ ಜೀವನ ನಡೆಸುವ ಹಕ್ಕಿದೆ ಎಂದು ಕೋರ್ಟ್ ಹೇಳಿದೆ. ಜೀವಿಸುವ ಹಕ್ಕು ಕೊಲ್ಲುವ ಹಕ್ಕಿಗಿಂತ ಮೇಲಿನದ್ದು. ಗೋಮಾಂಸ ತಿನ್ನುವವರ ಹಕ್ಕನ್ನು ಒಂದು ಮೂಲಭೂತ ಹಕ್ಕೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಹಸು ಮುದಿಯಾದಾಗಲೂ ಬಲು ಉಪಯೋಗಿ. ಅದರ ಸೆಗಣಿ ಹಾಗೂ ಮೂತ್ರ ಕೃಷಿ, ಔಷಧ ತಯಾರಿಕೆಯಲ್ಲಿ ಉಪಯೋಗಕಾರಿಯಾಗಿರುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಅದು ಮುದಿಯಾದರೂ ರೋಗಪೀಡಿತವಾದರೂ ತಾಯಿಯಂತೆ ಪೂಜಿಸಲಾಗುತ್ತದೆ ಎಂದೂ ಕೋರ್ಟ್ ಹೇಳಿದೆ. ಹಿಂದುಗಳು ಮಾತ್ರವಲ್ಲದೆ ಮುಸ್ಲಿಮರು ಕೂಡ ಅವುಗಳ ಮಹತ್ವವನ್ನು ಅರಿತಿದ್ದಾರೆ. ಮುಸ್ಲಿಮರು ತಮ್ಮ ಆಳ್ವಿಕೆಯ ವೇಳೆ ಗೋವು ಭಾರತದ ಸಂಸ್ಕೃತಿಯ ಒಂದು ಮುಖ್ಯ ಭಾಗವೆಂದು ಪರಿಗಣಿಸಿದ್ದರು. ಐವರು ಮುಸ್ಲಿಂ ಆಡಳಿತಗಾರರು ಗೋ ಹತ್ಯೆಯನ್ನು ನಿಷೇಧಿಸಿದ್ದರು. ಬಾಬರ್, ಹುಮಾಯೂನ್ ಮತ್ತು ಅಕ್ಬರ್ ಕೂಡ ಮುಸ್ಲಿಂರ ಧಾರ್ವಿುಕ ಹಬ್ಬಗಳಲ್ಲಿ ಪ್ರಾಣಿ ಬಲಿಯನ್ನು ನಿಷೇಧಿಸಿದ್ದರು ಎಂದು ಕೋರ್ಟ್ ನೆನಪಿಸಿದೆ. ಮೈಸೂರಿನ ನವಾಬ ಹೈದರ್ ಅಲಿ ಗೋ ಹತ್ಯೆಯನ್ನು ಶಿಕ್ಷಾರ್ಹ ಅಪರಾಧ ಎಂದು ಕಾನೂನು ಮಾಡಿದ್ದರು ಎಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 10 =
Remember me
