ಮುಂಬೈ:ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರದಿಂದ ಮತ್ತೆ ಕ್ಯಾತೆ ಮುಂದುವರಿದಿದ್ದು, ಸುಪ್ರೀಂಕೋರ್ಟ್​ ತೀರ್ಪು ನೀಡುವವರೆಗೂ ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ಹೆಚ್ಚು ಮರಾಠಿ ಮಾತನಾಡುವ ಏರಿಯಾಗಳನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಒತ್ತಾಯಿಸಿದ್ದಾರೆ.
“ಮಹಾರಾಷ್ಟ್ರ-ಕರ್ನಾಟಕ ಸೀಮಾವಾದ- ಸಂಘರ್ಷ ಮತ್ತು ಸಂಕಲ್ಪ” ಎನ್ನುವ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಇದುವರೆಗೆ ಏನು ನಡೆಯಿತು, ಅದು ನಡೆದು ಹೋಗಿದೆ. ನಾವೀಗ ಜಯ ಸಾಧಿಸಲು ಹೋರಾಡಬೇಕಿದೆ. ಸಮಯಕ್ಕೆ ಅನುಗುಣವಾಗಿ ನಾವು ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.
ಇದನ್ನೂ ಓದಿರಿ:ಗಂಡನ ಫೋನಲ್ಲಿ ತನ್ನದೇ ಫೋಟೋ ಕಂಡು ಗಂಡನ ಕೊಲೆ ಮಾಡಲು ಹೊರಟ ಹೆಂಡತಿ!
530 ಪುಟಗಳ ಪುಸ್ತವನ್ನು ಡಾ. ದೀಪಕ್​ ಪವಾರ್​ ಎಂಬುವರು ಬರೆದಿದ್ದಾರೆ. ಗಡಿ ವಿವಾದಿತ ವಿಚಾರ ಒಳಗೊಂಡ ಪುಸ್ತಕವು ಮಹಾರಾಷ್ಟ್ರ ಸರ್ಕಾರದಿಂದಲೇ ಸಿದ್ಧಗೊಂಡಿದೆ. ಮುಂಬೈನ ಮಲಬಾರ್ ಬೆಟ್ಟದ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಪುಸ್ತಕ ಬಿಡುಗಡೆಯಾಗಿದ್ದು, ಕಾರ್ಯಕ್ರಮದಲ್ಲಿ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಸೇರಿದಂತೆ ಅನೇಕ ಮಹಾರಾಷ್ಟ್ರ ನಾಯಕರು ಭಾಗಿಯಾಗಿದ್ದರು.
ಗಡಿ ವಿವಾದ ಪ್ರಕರಣ ಸುಪ್ರೀಂಕೋರ್ಟ್​ನಲ್ಲಿ ಇನ್ನು ಬಾಕಿ ಉಳಿದಿದೆ. ಆದರೆ, ಕರ್ನಾಟಕ ಸರ್ಕಾರ ವರ್ತಿಸುತ್ತಿರುವ ರೀತಿಯು ನ್ಯಾಯಾಲಯದ ಉಲ್ಲಂಘನೆಯಾಗಿದೆ. ಬೆಳಗಾಂ ಹೆಸರನ್ನು ಬೆಳಗಾವಿ ಎಂದು ಬದಲಾಯಿಸಿದ್ದಾರೆ. ಅದನ್ನು ಎರಡನೇ ರಾಜಧಾನಿಯನ್ನಾಗಿ ಮಾಡಿದ್ದಲ್ಲದೆ, ವಿಧಾನಸೌಧವನ್ನು ನಿರ್ಮಿಸಿ ಅಧಿವೇಶನವನ್ನು ನಡೆಸುತ್ತಿದ್ದಾರೆ. ಇದೆಲ್ಲವೂ ನ್ಯಾಯಾಂಗ ನಿಂದನೆಯಾಗಿದೆ ಎಂದು ಉದ್ಧವ್​ ಠಾಕ್ರೆ ನಾಲಿಗೆ ಹರಿಬಿಟ್ಟಿದ್ದಾರೆ.
ಇದನ್ನೂ ಓದಿರಿ:ಒಂದು ಕೋಣಕ್ಕಾಗಿ ಮೂರು ಗ್ರಾಮಗಳ ಪಟ್ಟು: ದೇವರ ತೀರ್ಪನ್ನು ಒಪ್ಪದ ಗ್ರಾಮಸ್ಥರು ಮಾಡಿದ್ದೇನು?
ಇದೇ ವೇಳೆ ಮಾತನಾಡಿದ ಶರಾದ್​ ಪವಾರ್​, ಪ್ರಕರಣ ಇನ್ನು ಕೋರ್ಟ್​ ಬಾಕಿ ಉಳಿದಿದೆ. ಪ್ರಕರಣವನ್ನು ನ್ಯಾಯಾಲಯ ಇತ್ಯರ್ಥ ಮಾಡಲಿದ್ದು, ನಮ್ಮ ವಿಚಾರವನ್ನು ಪರಿಣಾಮಕಾರಿಯಾಗಿ ಕೋರ್ಟ್​ ಮುಂದೆ ಪ್ರಸ್ತುತ ಪಡಿಸುತ್ತೇವೆ. ಈ ನಿಟ್ಟಿನಲ್ಲಿ ಸಿಎಂ ಠಾಕ್ರೆ ಅವರು ಕೆಲಸ ಮಾಡುತ್ತಿದ್ದಾರೆ ಎಂದರು.(ಏಜೆನ್ಸೀಸ್​)
3 ದಿನಗಳ ಹಿಂದೆ ಆಸ್ಟ್ರೇಲಿಯಾದಿಂದ ಭಾರತಕ್ಕೆ ಬಂದಿದ್ದವ ರೈತ ಹೋರಾಟಕ್ಕೆ ಬಲಿಯಾದ!

ಬಟ್ಟೆ ಬಿಚ್ಚದೇ ಮುಟ್ಟಿದರೆ ಲೈಂಗಿಕ ದೌರ್ಜನ್ಯವಲ್ಲ ಎಂದಿದ್ದ ಹೈಕೋರ್ಟ್‌- ವಿವಾದದ ಬೆನ್ನಲ್ಲೇ ತಡೆ ನೀಡಿದ ಸುಪ್ರೀಂ

ರೈತರ ಹೆಸರಲ್ಲಿ ಹಿಂಸೆಗಿಳಿದರು, ತಮ್ಮ ಧ್ವಜ ಹಾರಿಸಿದರು, ಹಲ್ಲೆ ಮಾಡಿದರು- ಏಳು ಮಂದಿ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 6 =
Remember me
