ಡೆಹರಾಡೂನ್:ಐಎಸ್​ಬಿಟಿ ಬಸ್​ನಲ್ಲಿ ಮೊರಾದಾಬಾದ್​ನಿಂದ ಡೆಹ್ರಾಡೂನ್​ಗೆ ಹೊರಟಿದ್ದ ಅಪ್ರಾಪ್ತ ಬಾಲಕಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್​ಐ ವರದಿ ಮಾಡಿದೆ. ಉತ್ತರ ಪ್ರದೇಶದ ಮೊರದಾಬಾದ್​ನ ಬಾಲಕಿಯು ದೆಹಲಿಯಿಂದ ಡೆಹರಾಡೂನ್​ಗೆ ಬಸ್​ನಲ್ಲಿ ಬಂದಿದ್ದಳು. ಆಕೆಯ ಮೇಲೆ ಆಗಸ್ಟ್ 12 ರಂದು ಲೈಂಗಿಕ ದೌರ್ಜನ್ಯ ನಡೆದಿತ್ತು.
ಇದನ್ನೂ ಓದಿ:ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಚೌಧರಿ ಜುಲ್ಫಿಕರ್ ಬಿಜೆಪಿಗೆ ಸೇರ್ಪಡೆ!
ಪ್ರಕರಣಕ್ಕೆ ಸಂಬಂಧಿಸಿದಂತೆ ಡೆಹ್ರಾಡೂನ್ ಎಸ್‌ಎಸ್‌ಪಿ ಅಜಯ್ ಸಿಂಗ್ ಮಾಹಿತಿ ನೀಡಿದ್ದು, ಬಾಲಕಿಯು ಇಲ್ಲಿನ ಮಳಿಗೆಯೊಂದರ ಪಕ್ಕದಲ್ಲಿ ಕುಳಿತಿರುವುದಾಗಿ ಹಾಗೂ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ಇರುವುದಾಗಿ ಆಗಸ್ಟ್ 13ರಂದು ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಬಂದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ಬಾಲಕಿಯನ್ನು ಬಾಲ ನಿಕೇತನ ಸಮಾಲೋಚನಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಎಂದು ತಿಳಿಸಿದ್ದಾರೆ.
2 ರಿಂದ 3 ದಿನಗಳ ಸಮಾಲೋಚನೆ ನಡೆಸಿದ ಬಳಿಕ ಸಂತ್ರಸ್ತೆಯು ತನ್ನ ಮೇಲೆ ಐವರು ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿಸಿದ್ದಾಳೆ ಎಂದಿದ್ದಾರೆ.ಬಾಲಕಿಯ ಹೇಳಿಕೆ ಪ್ರಕಾರ, ಅಂತರರಾಜ್ಯ ಬಸ್ ಟರ್ಮಿನಲ್​ನಲ್ಲಿ ನಿಲ್ಲಿಸಿದ್ದ ಉತ್ತರಾಖಂಡ ರಸ್ತೆ ಸಾರಿಗೆ ಬಸ್​ನಲ್ಲಿ ಮಧ್ಯರಾತ್ರಿ ಸಮಯದಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಲಾಗಿದೆ. ಈ ಸಂಬಂಧ ಐವರು ಅಪರಚಿತ ವ್ಯಕ್ತಿಗಳ ವಿರುದ್ಧ ಬಿಎನ್ಎಸ್ ಮತ್ತು ಪೋಕ್ಸೊ ಕಾಯಿದೆಯ ಸೆಕ್ಷನ್ 70 ರ ಅಡಿಯಲ್ಲಿ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದೆವು ಎಂದು ಸಿಂಗ್ ಹೇಳಿದ್ದಾರೆ.
ಬಾಲಕಿಯ ಕುಳಿತಿದ್ದ ಮಳಿಗೆಯ ಬಳಿ ಇದ್ದ ಶಂಕಿತ ವ್ಯಕ್ತಿ ಬಸ್ ಚಾಲಕ. ವಿಚಾರಣೆ ವೇಳೆ ಆತ ಇಡೀ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಬಸ್ ನಿರ್ವಾಹಕ ಸಹ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಸದ್ಯ ಒಟ್ಟು ಐವರನ್ನು ಬಂಧಿಸಲಾಗಿದೆ. ಇದರಲ್ಲಿ ಮೂವರು ಬಸ್ ಚಾಲಕರು, ಒಬ್ಬ ಕಂಡಕ್ಟರ್ ಮತ್ತು ಒಬ್ಬ ಕ್ಯಾಷಿಯರ್. ಫೊರೆನ್ಸಿಕ್ ತಂಡವು ಬಸ್‌ನಿಂದ ಸಾಕ್ಷ್ಯವನ್ನು ಸಂಗ್ರಹಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಬಾಲಕಿಯ ವೈದ್ಯಕೀಯ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದೇವೆ. ಬಾಲಕಿಯ ಗ್ರಾಮ ಯಾವುದು ಎಂದು ಪತ್ತೆ ಮಾಡಲಾಗಿದೆ. ಆಕೆಯ ಪೋಷಕರಿಗೆ ವಿಷಯ ತಿಳಿಸಿ ಬರಲು ಹೇಳಿದ್ದೇವೆ ಎಂದು ತಿಳಿಸಿದ್ದಾರೆ. ಎಸ್‌ಎಸ್‌ಪಿ ಮತ್ತು ಜಿಲ್ಲಾ ಪರೀಕ್ಷಾಧಿಕಾರಿಯಿಂದ ವಿವರವಾದ ಮಾಹಿತಿ ಪಡೆದ ನಂತರ, ತಪ್ಪಿತಸ್ತರ ವಿರುದ್ಧ ತಕ್ಷಣವೇ ಕ್ರಮಕ್ಕೆ ಸೂಚಿಸಿದ್ದೇನೆ. ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಕುಸುಮ್ ಹೇಳಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ: ರಾಜ್ಯಪಾಲರ ವಿರುದ್ಧ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 1 =
Remember me
