ನವದೆಹಲಿ:ದೇಶಾದ್ಯಂತ ಜಾತಿ ಆಧಾರಿತ ಜನಗಣತಿ ಶೀಘ್ರದಲ್ಲೇ ನಡೆಯಲಿದೆಯೇ ಎಂಬ ಕುತೂಹಲವೊಂದು ಇದೀಗ ಮೂಡಿದೆ. ಏಕೆಂದರೆ ಹನ್ನೊಂದು ರಾಜಕೀಯ ಪಕ್ಷಗಳ ಮುಖಂಡರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಜಾತಿ ಆಧಾರಿತ ಜನಗಣತಿ ನಡೆಸುವಂತೆ ಒತ್ತಾಯಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ 11 ರಾಜಕೀಯ ಪಕ್ಷಗಳ ಮುಖಂಡರ ನಿಯೋಗವೊಂದು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದು, ಬಿಹಾರ ವಿಧಾನಸಭೆ ವಿಪಕ್ಷ ನಾಯಕ ತೇಜಸ್ವಿ ಯಾದವ್ ಕೂಡ ಈ ನಿಯೋಗದಲ್ಲಿದ್ದರು.
ಬಿಹಾರ ವಿಧಾನಸಭೆ ಅಧಿವೇಶನದಲ್ಲಿ ಜಾತಿ ಆಧಾರಿತ ಜನಗಣತಿ ಕುರಿತು ಎರಡೆರಡು ಸಲ ಹೇಗೆ ನಿರ್ಣಯ ಕೈಗೊಳ್ಳಲಾಯಿತು ಎಂಬುದನ್ನು ಮೋದಿಯವರಿಗೆ ವಿವರಿಸಲಾಗಿದ್ದು, ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವರಿಕೆ ಮಾಡಲಾಯಿತು. ಬಿಹಾರದ ಜನತೆ ಮಾತ್ರವಲ್ಲ, ದೇಶದ ಬಹುತೇಕ ಜನತೆ ಈ ಕುರಿತು ಒಲವು ಹೊಂದಿದ್ದಾರೆ ಎಂದು ತಿಳಿಸಲಾಯಿತು ಎಂಬುದಾಗಿ ನಿತೀಶ್​ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ:ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಆರ್​ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್​, ‘ನಮ್ಮ ನಿಯೋಗ ಪ್ರಧಾನಿಯವರನ್ನು ಭೇಟಿಯಾಗಿ ನಮ್ಮ ರಾಜ್ಯದಲ್ಲಿ ಮಾತ್ರವಲ್ಲದೆ ದೇಶಾದ್ಯಂತವೂ ಜಾತಿ ಆಧಾರಿತ ಜನಗಣತಿ ಅಗತ್ಯವಿದೆ ಎಂದು ವಿವರಿಸಲಾಯಿತು. ನಾವು ಇನ್ನು ಆ ಕುರಿತ ನಿರ್ಣಯಕ್ಕೆ ಕಾಯುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.
ಪೂಜೆ ವೇಳೆ ಕಾಲು ಜಾರಿ ಪ್ರಪಾತಕ್ಕೆ ಬಿದ್ದ ಪೂಜಾರಿ ಸಾವು; ನೋಡನೋಡುತ್ತಿದ್ದಂತೆ ನೂರಾರು ಅಡಿ ಆಳಕ್ಕೆ ಉರುಳಿದ ದೇಹ..

‘ರಾಣಿ’ಯನ್ನು ಕೊಂದು ಹೂತಿಟ್ಟ ಭೂಪ; ದೇವಸ್ಥಾನದಲ್ಲೂ ಕದ್ದು ಸಿಕ್ಕಿಬಿದ್ದ; ಇಂದು ಆಕೆಯ ಶವ ಹೊರತೆಗೆದ ಪೊಲೀಸರು..

ಚಿತ್ರನಟಿಗೆ ಮನೆಯಲ್ಲೇ ತಾಳಿ ಕಟ್ಟಿ ಗಂಡನಂತೆ ನಟಿಸಿದ; ಬಳಿಕ ನಗ-ನಗದಿನೊಂದಿಗೆ ಪರಾರಿಯಾದ ರೌಡಿಯ ಅಣ್ಣ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
