ನವದೆಹಲಿ: ದೆಹಲಿ ಸಾರಿಗೆ ಸಂಸ್ಥೆ ಬಸ್​, ಕ್ಲಷ್ಟರ್​ ಬಸ್​, ಮೆಟ್ರೋ ಹಾಗೂ ಆಸ್ಪತ್ರೆಗಳನ್ನುಪ್ರತಿ ದಿನ ಸ್ವಚ್ಛಗೊಳಿಸಿ ಸೋಂಕು ನಿವಾರಿಸುವಂತೆ ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಹೇಳಿದರು.
ನಗರದಲ್ಲಿ ಕೊರೊನಾ ವೈರಸ್​ ಹರಡುವಿಕೆ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ವೈರಸ್​ ಬಗ್ಗೆ ಜನರು ಭಯಪಡುವುದು ಬೇಡ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಇದುವರೆಗೆ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಮೂರು ಮಂದಿಯಲ್ಲಿ ಕೊರೊನಾ ವೈರಸ್​ ಪತ್ತೆಯಾಗಿದೆ. ಮತ್ತೊಬ್ಬರಲ್ಲಿ ವೈರಸ್​ ಹರಡಿರುವ ಶಂಕೆ ವ್ಯಕ್ತವಾಗಿ ಅವರ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದರು.
ವೈರಸ್​ ಸೋಂಕು ಹರಡಿದವರ ಚಿಕಿತ್ಸೆಗಾಗಿ 25 ಆಸ್ಪತ್ರೆಗಳಲ್ಲಿ 168 ಪ್ರತ್ಯೇಕ ಹಾಸಿಗೆಗಳನ್ನು ಸ್ಥಾಪಿಸಲಾಗಿದೆ. ಕಳೆದ 14 ದಿನಗಳಲ್ಲಿ ತಮ್ಮ ನೆರೆಯವರು ವಿದೇಶಗಳಿಂದ ದೆಹಲಿಗೆ ಹಿಂದಿರುಗಿದ್ದರೆ ಅವರ ಬಗ್ಗೆ ಮಾಹಿತಿ ನೀಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.
ಸೋಂಕು ಪತ್ತೆಯಾಗಿರುವ ಮೊದಲ ವ್ಯಕ್ತಿ 14 ದಿನಗಳ ಹಿಂದೆ 105 ಮಂದಿಯ ಸಂಪರ್ಕಕ್ಕೆ ಬಂದಿದ್ದರು, 2ನೇ ವ್ಯಕ್ತಿ 168 ಮಂದಿ ಹಾಗೂ 3ನೇ ಸೋಂಕು ಪೀಡಿತ ವ್ಯಕ್ತಿ 64 ಮಂದಿಯ ಸಂಪರ್ಕಕ್ಕೆ ಬಂದಿದ್ದರು. ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಮಾಡಿ ಅವರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. (ಏಜೆನ್ಸೀಸ್​)
ಕೊರೊನಾ ವೈರಸ್​ ಹರಡಿದರೆ ಏನು ಮಾಡಬೇಕು? ಏನು ಮಾಡಬಾರದು? : ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಪಾಠ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 13 =
Remember me
