ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಮತ್ತು ಉಪ ಮುಖ್ಯಮಂತ್ರಿ ಮನೀಷ್​ ಸಿಸೋಡಿಯ ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿದರು.
ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವ ಗುಂಪು ಈಶಾನ್ಯ ದೆಹಲಿಯಲ್ಲಿ ಸೋಮವಾರ ಹಿಂಸಾಚಾರಕ್ಕೆ ಇಳಿದಿತ್ತು. ಇದರಿಂದ ಹಲವರ ಪ್ರಾಣಿ ಹಾನಿ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿಗೆ ಕಾರಣವಾಗಿದ್ದು ಇನ್ನು ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಗಾಯಗೊಂಡವರನ್ನು ದೆಹಲಿಯ ಗುರು ತೇಜ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿದ ದೆಹಲಿ ಸಿಎಂ ಮತ್ತು ಡಿಸಿಎಂ ಗಾಯಾಳುಗಳ ಕ್ಷೇಮ ವಿಚಾರಿಸಿದರು.
ದೆಹಲಿಯಲ್ಲಿ ನಡೆಯುತ್ತಿರುವ ಈ ಹಿಂಸಾಚಾರ ಇಡೀ ದೇಶವನ್ನೇ ಚಿಂತೆಗೀಡು ಮಾಡಿದೆ. ಇದರಿಂದ ಜೀವ ಮತ್ತು ಆಸ್ತಿ ಪಾಸ್ತಿಗಳ ಹಾನಿಯಾಗಿದೆ. ಇದು ಎಲ್ಲರ ಮೇಲೂ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ ಸಿಎಂ ಅರವಿಂದ ಕೇಜ್ರಿವಾಲ್, ಶಾಂತಿ ಕಾಪಾಡುವಂತೆ ದೆಹಲಿಯ ಜನರಲ್ಲಿ ಮನವಿ ಮಾಡಿದರು.
ಸೋಮವಾರ ನಡೆದ ಹಿಂಸಾಚಾರದಿಂದ ಪೊಲೀಸರು, ನಾಗರಿಕರು ಗಾಯಗೊಂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
