ನವದೆಹಲಿ: ದೆಹಲಿ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಆಮ್​ ಆದ್ಮಿ ಪಾರ್ಟಿ ಮುನ್ನಡೆಯಲ್ಲಿದೆ. ಆದಾಗ್ಯೂ, ನಾನು ನರ್ವಸ್ ಆಗಿಲ್ಲ. ನಾವು ಪರೀಕ್ಷೆ ಎದುರಿಸಿದ್ದೇವೆ. ಫಲಿತಾಂಶ ಈಗ ಬರುತ್ತಿದೆ. ಪಕ್ಷದ ಕಚೇರಿಯಲ್ಲಿ ಸಂಭ್ರಮಾಚರಣೆಗೆ ತಯಾರಿ ನಡೆದಿದೆ. ಪಕ್ಷದ ಕಾರ್ಯಕರ್ತರ ಪರಿಶ್ರಮಕ್ಕೆ ಸರಿಯಾದ ಫಲ ಸಿಕ್ಕೇ ಸಿಗುತ್ತದೆ. ನನಗೆ ಆ ವಿಶ್ವಾಸ ಇದೆ ಎಂದು ಬಿಜೆಪಿ ದೆಹಲಿ ಘಟಕದ ಮುಖ್ಯಸ್ಥ ಮನೋಜ್ ತಿವಾರಿ ಮಂಗಳವಾರ ಬೆಳಗ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈಗ ಮಾತುಕತೆಗಳೆಲ್ಲ ಮುಗಿದು ಹೋಗಿವೆ. ಈಗೇನಿದ್ದರೂ ಜನರ ಆಶೀರ್ವಾದಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ಬಿಜೆಪಿಗೂ ಒಳ್ಳೆಯ ದಿನಗಳು ಬರಲಿವೆ. ದೆಹಲಿಯಲ್ಲಿ ನಾವು ಅಧಿಕಾರ ಚುಕ್ಕಾಣಿ ಹಿಡಿದರೆ ಅಚ್ಚರಿ ಪಡಬೇಡಿ. ಅದೇ ರೀತಿ 55 ಸ್ಥಾನಗಳಲ್ಲಿ ಗೆಲುವು ನಮ್ಮದಾದರೂ ಹುಬ್ಬೇರಿಸಬೇಡಿ ಎಂದು ತಿವಾರಿ ಹೇಳಿದ್ದಾರೆ.
ಅವರು ಈ ಹೇಳಿಕೆ ನೀಡಿದ ಸಂದರ್ಭದಲ್ಲಿ ಆಮ್ ಆದ್ಮಿ 41 ಸ್ಥಾನದಲ್ಲೂ ಬಿಜೆಪಿ 19ರಲ್ಲೂ ಮುನ್ನಡೆಯಲ್ಲಿದ್ದವು. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
