ನವದೆಹಲಿ:ಕರೊನಾದ ಲಘು ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ. ಅಂಥವರಿದ್ದರೂ 24 ತಾಸಿನೊಳಗೆ ಡಿಸ್ಚಾರ್ಜ್​ ಮಾಡಿ ಎಂದು ಆದೇಶ ಹೊರಡಿಸಿದ್ದ ದೆಹಲಿ ಸರ್ಕಾರ, ಈಗ ಮತ್ತೊಂದು ಕಠಿಣ ಕ್ರಮಕ್ಕೆ ಮುಂದಾಗಿದೆ.
ದೆಹಲಿಯಲ್ಲಿರುವ ಆಸ್ಪತ್ರೆಗಳನ್ನು ಸ್ಥಳೀಯರ ಚಿಕಿತ್ಸೆಗೆ ಮೀಸಲಾಗಿರಿಸುತ್ತಿದೆ. ಕರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಆರೋಗ್ಯ ಮೂಲ ಸೌಕರ್ಯಗಳನ್ನು ದೆಹಲಿಯವರಿಗೆ ಮೀಸಲಾಗಿಡಬೇಕು ಎಂದು ದೆಹಲಿ ಸರ್ಕಾರ ರೂಪಿಸಿದ್ದ ತಜ್ಞರ ಸಮಿತಿ ಶಿಫಾರಸು ಮಾಡಿದೆ. ಬೇರೆ ರಾಜ್ಯಗಳ ಕೋವಿಡ್​ ರೋಗಿಗಳಿಗೆ ಅವಕಾಶ ನೀಡಿದ್ದೇ ಆದಲ್ಲಿ, ಮೂರೇ ದಿನಗಳಲ್ಲಿ ದೆಹಲಿ ಎಲ್ಲ ಆಸ್ಪತ್ರೆಗಳ ಒಳರೋಗಿ ದಾಖಲು ಸಾಮರ್ಥ್ಯ ಮುಗಿದು ಹೋಗಲಿದೆ ಎಂಬ ಆತಂಕ ವ್ಯಕ್ತಪಡಿಸಿದೆ.
ಇದನ್ನೂ ಓದಿ;ಎರಡು ಲಕ್ಷ ಸೋಂಕಿತರಿದ್ದರೂ ಭಾರತ ಭಯಪಡಬೇಕಿಲ್ಲ; ವಿಶ್ವ ಆರೋಗ್ಯ ಸಂಸ್ಥೆಗೆ ಏಕಿಂಥ ವಿಶ್ವಾಸ…?
ಇಂದ್ರಪ್ರಸ್ಥ ವಿಶ್ವ ವಿದ್ಯಾಲಯದ ಕುಲಪತಿ ಡಾ. ಮಹೇಶ್​ ವರ್ಮಾ ಈ ಸಮಿತಿಯ ನೇತೃತ್ವ ವಹಿಸಿದ್ದರು. ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ, ಕೇಂದ್ರ ಸಚಿವ ಮುಖ್ತಾರ್​ ಅಬ್ಬಾಸ್​ ನಕ್ವಿ ಈ ಕ್ರಮವನ್ನು ವಿರೋಧಿಸಿದ್ದಾರೆ. ಮುಂಬೈ ಆಸ್ಪತ್ರೆಗಳು ಮುಂಬೈನವರಿಗೆ, ಕೋಲ್ಕತ್ತ ಆಸ್ಪತ್ರೆಗಳು ಕೋಲ್ಕತ್ತದವರಿಗೆ ಎಂದು ಹೇಳಲಾಗುತ್ತದೆಯೇ? ದೆಹಲಿಗೆ ಬರಲು ಪಾಸ್​ಪೋರ್ಟ್​ ವೀಸಾಗಳ ಅಗತ್ಯವಿಲ್ಲ, ದೇಶದ ಎಲ್ಲೆಡೆಯಿಂದ ಜನರು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬೇಕೆಂದು ನಕ್ವಿ ಒತ್ತಾಯಿಸಿದ್ದಾರೆ.
ಸದ್ಯ ದೆಹಲಿಯಲ್ಲಿ 26 ಸಾವಿರಕ್ಕೂ ಅಧಿಕ ಕರೊನಾ ಸೋಂಕಿತರಿದ್ದಾರೆ. 700ಕ್ಕೂ ಜನರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರ, ತಮಿಳುನಾಡು ಬಳಿಕ ಅತಿ ಹೆಚ್ಚು ರೋಗಿಗಳು ದೆಹಲಿಯಲ್ಲಿದ್ದಾರೆ.
ಇದನ್ನೂ ಓದಿ;ಅಮೆರಿಕ ತಯಾರಿಸಿದೆ 20 ಲಕ್ಷ ಡೋಸ್​ ಕರೊನಾ ಲಸಿಕೆ; ಟ್ರಂಪ್​ ಬಹಿರಂಗ
ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೂ ಲಾಕ್​ಡೌನ್​ ತೆರವು ಮಾಡಲಾಗಿದೆ. ಹೋಟೆಲ್​, ರೆಸ್ಟೋರಂಟ್​, ಮಾಲ್​ ತೆರೆಯಲು ಅವಕಾಶ ನೀಡಲಾಗಿದೆ. ಅಂತರ ರಾಜ್ಯ ಸಂಚಾರಕ್ಕೂ ಗಡಿಯನ್ನು ಮುಕ್ತವಾಗಿಸಲಾಗಿದೆ. ಹೀಗಾಗಿ ಸೋಂಕಿನ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.
ಕರೊನಾ ಲಸಿಕೆಗೆ ಇನ್ನೊಂದೇ ಹೆಜ್ಜೆ…! ಜುಲೈನಲ್ಲಿ 30 ಸಾವಿರ ಜನರ ಮೇಲೆ ಅಂತಿಮ ಪರೀಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
