ನವದೆಹಲಿ: ಇಂದು ಬೆಳಗ್ಗೆಯಿಂದಲೇ ಸುರಿಯುತ್ತಿರುವ ಧಾರಕಾರ ಮಳೆಗೆ ದೆಹಲಿ-ಎನ್​ಸಿಆರ್​ ತತ್ತರಿಸಿದೆ. ಸಿಡಿಲು, ಗುಡುಗಿನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಗರದ ಪ್ರಮುಖ ರಸ್ತೆಗಳು ಮಳೆಗೆ ಜಲಾವೃತಗೊಂಡಿವೆ. ಮಳೆಯ ಆರ್ಭಟಕ್ಕೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಮೇಲ್ಛಾವಣಿ ಕುಸಿದು ಓರ್ವ ಸಾವಿಗೀಡಾಗಿದ್ದು, ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ.
Now on my way to the airport to fly to my constituency for the weekend as usual. This was our usual route, which we avoided today!!pic.twitter.com/2XpdRfSBdK
— Shashi Tharoor (@ShashiTharoor)June 28, 2024

ಭಾರೀ ಮಳೆಗೆ ಹಲವಾರು ಕಾರುಗಳು ಅವಶೇಷಗಳಡಿ ಸಿಲುಕಿವೆ. ಬೆಳಿಗ್ಗೆ 5:30ರ ಸುಮಾರಿಗೆ ಸಂಭವಿಸಿದ ಈ ಘಟನೆಯ ಬೆನ್ನಲ್ಲೇ ದೆಹಲಿ ಅಗ್ನಿಶಾಮಕ ದಳ, ಮೂರು ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದೆ. ರಾಜಧಾನಿಯ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿದಿದ್ದು, ಜನರು ಮನೆಯಿಂದ ಹೊರಬರದಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಮುಂದಿನ 7 ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ (IMD), ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಲವಾದ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹೊಸ ಪ್ರಕಟಣೆಯಲ್ಲಿ ತಿಳಿಸಿದೆ,(ಏಜೆನ್ಸೀಸ್).
ಭಾರತದ ಹೆಡ್​ ಕೋಚ್​ ಆಗುವುದಾದರೆ… ಗೌತಮ್ ಗಂಭೀರ್​ ಮುಂದಿಟ್ಟ 5 ಬೇಡಿಕೆಗಳಿಗೆ ದಂಗಾದ ಬಿಸಿಸಿಐ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 7 =
Remember me
