ನವದೆಹಲಿ:ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ತಡೆಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಮಧ್ಯ ಪ್ರವೇಶ ಮಾಡಬೇಕು ಎಂದು ಕಾಂಗ್ರೆಸ್​ ನಿಯೋಗ ಆಗ್ರಹಿಸಿದೆ.
ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾಗಾಂಧಿ ನೇತೃತ್ವದಲ್ಲಿ ರಾಷ್ಟ್ರಪತಿ ಭೇಟಿ ಮಾಡಿದ ಕಾಂಗ್ರೆಸ್​ ನಿಯೋಗ ಮನವಿ ಸಲ್ಲಿಸಿತು.
ಹಿಂಸಾಚಾರವನ್ನು ಕೇಂದ್ರ ಹಾಗೂ ದೆಹಲಿ ಸರ್ಕಾರ ಮೂಕ ಪ್ರೇಕ್ಷಕರಂತೆ ನೋಡುತ್ತಿವೆ. ಹೀಗಾಗಿ ತಾವು ಮಧ್ಯ ಪ್ರವೇಶ ಮಾಡಿ ಹಿಂಸಾಚಾರ ತಡೆಯಬೇಕು ಎಂದು ನಿಯೋಗ ಮನವಿಯಲ್ಲಿ ಆಗ್ರಹಿಸಿದೆ.
ಹಿಂಸಾಚಾರ ತಡೆಯಲು ವಿಫಲರಾಗಿರುವ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸೋನಿಯಾ ಗಾಂಧಿ ಅವರು ಆಗ್ರಹಿಸಿದರು.
ಹಿಂಸಾಚಾರ ತಡೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಿಂಸೆಯನ್ನು ಮೂಕ ಪ್ರೇಕ್ಷಕರಂತೆ ನೋಡುತ್ತಿವೆ. ಹಿಂಸೆ ಹಾಗೂ ಆಸ್ತಿ ಲೂಟಿ ನಡೆಯುತ್ತಿದೆ. ರಾಷ್ಟ್ರದ ರಾಜಧಾನಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಏನಾಗಿದೆ ಎಂಬುದು ತೀವ್ರ ಕಳವಳಕಾರಿಯಾದ ವಿಚಾರ. ಇದೊಂದು ರಾಷ್ಟ್ರೀಯ ಅವಮಾನ. ಗಲಭೆಯಲ್ಲಿ 34 ಮಂದಿ ಮೃತಪಟ್ಟು 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.ನಿಯೋಗದಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್​, ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್, ಮುಖಂಡರಾದ ಅಹ್ಮದ್ ಪಟೇಲ್ ಮತ್ತು ರಂದೀಪ್ ಸುರ್ಜೇವಲಾ ಇದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − five =
Remember me
