ಹೈದ್ರಾಬಾದ್​:ಟಾಲಿವುಡ್​ ನಟ ಧನುಷ್​​​ ಸೂಪರ್​ ಸ್ಟಾರ್​ ರಜನಿಕಾಂತ್​ ಅವರ ಪುತ್ರಿ ಐಶ್ವರ್ಯ ಅವರಿಗೆ ವಿಚ್ಛೇದನ ನೀಡಿ ದೂರವಾಗಿ ವರ್ಷಗಳೆ ಕಳೆದಿದೆ. ಆದರೆ ಪತ್ನಿಯಿಂದ ದೂರವಾಗಿದ್ದರು ಧನುಷ್​ ಅವರಿಗೆ ಮಾವ ರಜಿನಿಕಾಂತ್​ ಅವರ ಮೇಲೆ ಅಗಾಧವಾದ ಪ್ರೀತಿ ಇದೆ. ಇದಕ್ಕೆ ಪೂರಕ ಎನ್ನುವಂತ ಸುದ್ದಿಯೊಂದು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ.
ಧನುಷ್​ ಟ್ವೀಟ್​ನಲ್ಲಿ ಏನಿದೆ?:ಧನುಷ್ ಅವರು ಲಾಲ್ ಸಲಾಮ್ ಚಿತ್ರದ ಟ್ರೇಲರ್ ಅನ್ನು ಹಂಚಿಕೊಂಡಿದ್ದಾರೆ ಮತ್ತು “ತಂಡಕ್ಕೆ ಶುಭಾಶಯಗಳು. ದೇವರು ಒಳ್ಳೆಯದು ಮಾಡಲಿ. #ಸೂಪರ್ ಸ್ಟಾರ್ #ತಲೈವರ್.” ಎಂದು ಪೋಸ್ಟ್​​ ಮಾಡಿದ್ದಾರೆ.
Lal salaam trailerhttps://t.co/jUlBWLLtTXBest wishes to the team. God bless.#superstar#thalaivar
— Dhanush (@dhanushkraja)February 5, 2024

ಧನುಷ್ ಲಾಲ್ ಸಲಾಮ್  ಚಿತ್ರಕ್ಕೆ ಶುಭಕೋರಿ ಪೋಸ್ಟ್‌ ಮಾಡಿದ್ದಾರೆ. ಆದರೆ ಸಿನಿಮಾಕ್ಕೆ ಧುನುಷ್​  ಅವರ ಮಾಜಿ ಪತ್ನಿ ಐಶ್ವರ್ಯಾ ರಜನಿಕಾಂತ್ ನಿರ್ದೇಶನವಿದೆ. ಪತ್ನಿ ಐಶ್ವರ್ಯಾ ರಜನಿಕಾಂತ್ ಅವರ ಹೆಸರು ಉಲ್ಲೇಖಿಸದೆ ಮಾವನ ಸಿನಿಮಾಕ್ಕೆ ವಿಶ್​​ ಮಾಡಿದ್ದಾರೆ ಧನುಷ್​. ಮಾವನ ಕುರಿತಾಗಿ ಇನ್ನು ಪ್ರೀತಿ ಇದೆ ಎಂದು ಅಭಿಮಾನಿಗಳು ಕಾಮೆಂಟ್​​ ಮಾಡುತ್ತಿದ್ದಾರೆ.
ಧನುಷ್ ರಜನಿಕಾಂತ್ ಅವರ ದೊಡ್ಡ ಅಭಿಮಾನಿ ಎಂಬುದು ಗುಟ್ಟಾಗಿ ಉಳಿದಿಲ್ಲ.ಮುಂಬರುವ ಚಿತ್ರದಲ್ಲಿ ಕಾಣಿಸಿಕೊಂಡಿರುವ ಕಾರಣ, ಧನುಷ್ ಲಾಲ್ ಸಲಾಂ ಮತ್ತು ರಜನಿಕಾಂತ್ ಅವರಿಗೆ ಶುಭಕೋರಿದ್ದಾರೆ.
ಧನುಷ್ ಮತ್ತು ಐಶ್ವರ್ಯ ಜನವರಿ 2022 ರಲ್ಲಿ ಬೇರ್ಪಟ್ಟರು. ಅವರು ತಮ್ಮ ಬೇರ್ಪಟ್ಟ ಸುದ್ದಿಯನ್ನು Instagram ನಲ್ಲಿ ಹಂಚಿಕೊಂಡಿದ್ದರು.“18 ವರ್ಷಗಳ ಕಾಲ ಸ್ನೇಹಿತರು, ದಂಪತಿ, ಪೋಷಕರು ಮತ್ತು ಪರಸ್ಪರ ಹಿತೈಷಿಗಳಾಗಿ ಒಟ್ಟಿಗೆ ಇದ್ದೇವೆ. ಈಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿದೆ.ಇಂದು ನಾವು ನಮ್ಮ ಮಾರ್ಗಗಳು ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ ಎಂದು ಹೇಳುವ ಮೂಲಕವಾಗಿ ವಿಚ್ಚೇದನ ಪಡೆದುಕೊಳ್ಳುತ್ತಿರುವ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದರು.
ಲಾಲ್ ಸಲಾಮ್ ಬಗ್ಗೆ ಹೇಳುವುದಾದರೆ, ಲಾಲ್ ಸಲಾಂ ಈ ವಾರಾಂತ್ಯದಲ್ಲಿ ಬಿಡುಗಡೆಯಾಗಲಿದೆ. ಲಾಲ್ ಸಲಾಂ ಚಿತ್ರದ ಮೂಲಕ ನಿರ್ದೇಶಕಿಯಾಗಿ ಐಶ್ವರ್ಯ ಕಮ್​ಬ್ಯಾಕ್​ ಮಾಡಿದ್ದಾರೆ. ಈ ಚಿತ್ರವನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸುಬಾಸ್ಕರನ್ ಅಲ್ಲಿರಾಜ ನಿರ್ಮಿಸಿದ್ದಾರೆ. ಚಿತ್ರದ ಸಂಗೀತವನ್ನು ಎಆರ್ ರೆಹಮಾನ್ ಸಂಯೋಜಿಸಿದ್ದಾರೆ. ವಿಷ್ಣು ರಂಗಸಾಮಿ ಕಥೆ ಬರೆದಿದ್ದಾರೆ ಮತ್ತು ಐಶ್ವರ್ಯಾ ರಜನಿಕಾಂತ್ ಜೊತೆ ಚಿತ್ರಕಥೆ ಬರೆದಿದ್ದಾರೆ. ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಅವರು ಸ್ವತಃ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ.
ವಿತರಣಾ ಹಕ್ಕುಗಳನ್ನು ನಟ ಕಮ್ ರಾಜಕಾರಣಿ ಉದಯನಿಧಿ ಸ್ಟಾಲಿನ್ ಅವರ ಹೋಮ್ ಬ್ಯಾನರ್ ರೆಡ್ ಗೈಂಟ್ ಮೂವೀಸ್ ಪಡೆದುಕೊಂಡಿದೆ. ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಎಂಬ ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ಹೊಸದಾಗಿ ಮದುವೆಯಾಗುವ ಜೋಡಿಗಳಿಗೆ ಸಾನಿಯಾ ಮಿರ್ಜಾ ಕೊಟ್ಟ ಟಿಪ್ಸ್​ ಏನು ಗೊತ್ತಾ?

ಪ್ರೇಮಿಗಳ ದಿನ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ; ಮದ್ಯಪ್ರಿಯ ಪ್ರೇಮಿಗಳಿಗೆ ನಿರಾಸೆ

ನೀವು ನಿಜವಾದ ಪ್ರೇಮಿ ಆಗಿದ್ದರೆ ಇಲ್ಲಿ ಅಡಗಿಸಿರುವ ಹೃದಯವನ್ನು 10 ಸೆಕೆಂಡುಗಳಲ್ಲಿ ಪತ್ತೆ ಮಾಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
