ಬೆಂಗಳೂರು: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದು, ಬಂಡಾಯದ ಬಾವುಟ ಹಾರಿಸಿದ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಇರುವ ಕಾರಣ ಬುಧವಾರ ಹಲವು ನಾಟಕೀಯ ಬೆಳವಣಿಗೆಗಳು ನಡೆದವು.
ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣಾ ಕಣಕ್ಕೆ ಪ್ರವೇಶಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರಿಗೆ ಇದೀಗ ಸೋಲಿನ ಭೀತಿ ಎದುರಾಗಿದ್ದು, ಅವರು ಭಿನ್ನಮತೀಯ ಶಾಸಕರ ಜತೆಗೆ ಮಾತುಕತೆಗೆ ಬುಧವಾರ ಬೆಳಗ್ಗೆಯೇ ಆಗಮಿಸಿದ್ದರು. ಕಾಂಗ್ರೆಸ್​ ಪಕ್ಷದ ಟ್ರಬಲ್ ಶೂಟರ್ ಎಂದೇ ಜನಪ್ರಿಯರಾಗಿರುವ ಡಿ.ಕೆ.ಶಿವಕುಮಾರ್ ಈಗ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಕಾರಣ, ಭಿನ್ನಮತೀಯ ಶಾಸಕರ ಮನವೊಲಿಸಿ ವಾಪಸ್​ ಕರೆದುಕೊಂಡು ಹೋಗುವ ವಿಚಾರವೀಗ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ.
ದಿಗ್ವಿಜಯ ಸಿಂಗ್ ಅವರನ್ನು ಡಿ.ಕೆ.ಶಿವಕುಮಾರ್ ಬರಮಾಡಿಕೊಂಡು, ಭಿನ್ನಮತೀಯ ಶಾಸಕರು ಉಳಿದುಕೊಂಡಿರುವ ರಮಡಾ ಹೋಟೆಲ್​ಗೆ ತೆರಳಿದ ವೇಳೆ ಅಲ್ಲಿದ್ದ ಪೊಲೀಸರು ಇವರನ್ನು ಒಳಗೆ ಬಿಟ್ಟಿರಲಿಲ್ಲ. ಇದನ್ನು ಪ್ರತಿಭಟಿಸಿ ದಿಗ್ವಿಜಯ ಸಿಂಗ್ ಮತ್ತು ಇತರೆ ನಾಯಕರು ಆ ಹೋಟೆಲ್ ಎದುರೇ ಧರಣಿ ಕುಳಿತಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಇದೀಗ ಅವರನ್ನು ಬಂಧಿಸಿ ಕರೆದೊಯ್ದರು. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಮಧ್ಯಪ್ರದೇಶ ರಾಜಕೀಯದ ಹೈಡ್ರಾಮಾ..

#WATCHKarnataka: Congress leader Digvijaya Singh has now been placed under preventive arrest. He was sitting on dharna near Ramada hotel in Bengaluru, allegedly after he was not allowed by Police to visit it. 21#MadhyaPradeshCongress MLAs are lodged at the hotel.pic.twitter.com/dP3me4qjw0
— ANI (@ANI)March 18, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 10 =
Remember me
