ನವದೆಹಲಿ:ವಾಸ್ತವ ಗಡಿರೇಖೆಯ ಬಳಿಯ ಗಲ್ವಾನ್​ ಕಣಿವೆಯಲ್ಲಿ ಸೋಮವಾರ ರಾತ್ರಿ ಚೀನಿಯರು ನಡೆಸಿದ ದಾಳಿಯಲ್ಲಿ ಭಾರತದ ಒಬ್ಬ ಸೇನಾಧಿಕಾರಿ ಮತ್ತು ಇಬ್ಬರು ಯೋಧರು ಹುತಾತ್ಮರಾದ ಬೆನ್ನಲ್ಲೇ, ಈ ವಿಷಯವಾಗಿ ಏಕಪಕ್ಷೀಯ ನಿರ್ಧಾರ ಕೈಗೊಂಡು ಅಪಾಯ ಮೈಮೇಲೆ ಎಳೆದುಕೊಳ್ಳಬೇಡಿ ಎಂದು ಚೀನಾ ಧಮ್ಕಿ ಹಾಕಿದೆ.
ಬೀಜಿಂಗ್​ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಈ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.ಇದಕ್ಕೂ ಮುನ್ನ ಲಡಾಖ್​ ಬಿಕ್ಕಟ್ಟನ್ನು ಪರಿಹರಿಸಲು ಭಾರತ ಮತ್ತು ಚೀನಾ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳು ಸೇನೆಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳುತ್ತಿವೆ. ಸೋಮವಾರ ರಾತ್ರಿ ಗಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ತಿಕ್ಕಾಟ ಆರಂಭವಾಗಿತ್ತು. ಈ ಸಂದರ್ಭದಲ್ಲಿ ಚೀನಿಯರು ದಾಳಿ ಮಾಡಿದರು ಎನ್ನಲಾಗಿದೆ.
ಈ ದಾಳಿಯಲ್ಲಿ ಭಾರತದ ಕರ್ನಲ್​ ದರ್ಜೆಯ ಒಬ್ಬ ಅಧಿಕಾರಿ ಮತ್ತು ಇಬ್ಬರು ಯೋಧರು ಹುತಾತ್ಮರಾದರು ಎಂದು ಸೇನಾಪಡೆ ಮೂಲಗಳು ತಿಳಿಸಿವೆ.
ಲಡಾಖ್​ ಬಿಕ್ಕಟ್ಟನ್ನು ಶಮನಗೊಳಿಸಲು ಭಾರತ ಮತ್ತು ಚೀನಾದ ಮಿಲಿಟರಿ ಅಧಿಕಾರಿಗಳು ಮಂಗಳವಾರ ಮಾತುಕತೆ ಮುಂದುವರಿಸಿದ್ದಾರೆ ಎಂದು ಹೇಳಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fourteen =
Remember me
