ನವದೆಹಲಿ:ವಾಹನ ಚಾಲನೆಯಲ್ಲಿ ನಿರ್ಲಕ್ಷ್ಯ ತೋರಿ, ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಅವರ ಬೆಂಗಾವಲು ಪಡೆಯ ವಾಹನವೊಂದರ ಚಾಲಕನನ್ನು ಬಂಧಿಸಲಾಯಿತು. ವಿಚಾರಣೆಯ ಬಳಿಕ ಆತನನ್ನು ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿರುವುದರಿಂದ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ತಂಗಿದ್ದ ತಾಜ್ ಹೋಟೆಲ್‌ಗೆ ಅಮೆರಿಕ ಅಧ್ಯಕ್ಷರ ಬೆಂಗಾವಲು ಪಡೆಯಿಂದ ಬಂದ ಕಾರೊಂದು ಪ್ರವೇಶಿಸಿದ ನಂತರ ಈ ವಿದ್ಯಾಮಾನ ಜರುಗಿದೆ. ಕಾರನ್ನು ನೋಡುತ್ತಿದ್ದಂತೆ ಸ್ಥಳದಲ್ಲಿದ್ದ ಭದ್ರತಾ ಅಧಿಕಾರಿಗಳು ಎಚ್ಚರಿಕೆ ಸಂದೇಶ ರವಾನಿಸಿದರು.
ಇದನ್ನೂ ಓದಿ:ಹೆಮ್ಮೆಯ ಹಿಂದು: ದೆಹಲಿಯ ಅಕ್ಷರಧಾಮಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಿಷಿ ಸುನಕ್ ದಂಪತಿ​
ಈ ಬಗ್ಗೆ ವಿಚಾರಣೆ ಮಾಡಿದಾಗ ಬೈಡೆನ್ ತಂಗಿದ್ದ ಐಟಿಸಿ ಮೌರ್ಯ ಹೋಟೆಲ್​ಗೆ ಬೆಳಿಗ್ಗೆ 9.30ಕ್ಕೆ ಬರಬೇಕಿತ್ತು. ಆದರೆ, ಲೋಧಿ ಎಸ್ಟೇಟ್ ಪ್ರದೇಶದಿಂದ ಬಂದ ಉದ್ಯಮಿಯನ್ನು ತಾಜ್‌ಗೆ ಬಿಡಬೇಕಾಗಿದ್ದರಿಂದ ಅವರು ತಾಜ್‌ಗೆ ಬಂದಿದ್ದು, ತನಗೆ ಶಿಷ್ಠಾಚಾರ ಬಗ್ಗೆ ಗೊತ್ತಾಗಲಿಲ್ಲ ಎಂದಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಕಾರು ಚಾಲಕನನ್ನು ಬಿಟ್ಟು ಕಳುಹಿಸಲಾಯಿತು.
ಎರಡು ದಿನಗಳ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ಶುಕ್ರವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು ಮತ್ತು ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದರು. ನಿನ್ನೆ ನಡೆದ ಮೊದಲ ದಿನದ ಶೃಂಗ ಸಭೆಯಲ್ಲಿ ಭಾಗವಹಿಸಿದರು. ಇಂದು ಬೆಳಗ್ಗೆ ರಾಜ್​ಘಾಟ್​ನಲ್ಲಿರುವ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಬಳಿಕ ವಿಯೆಟ್ನಾಂಗೆ ತೆರಳಿದರು.(ಏಜೆನ್ಸೀಸ್​)
ಚಿನ್ನದ ಬೆಲೆಯಲ್ಲಿ ನಿರಂತರ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ?

VIDEO| ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ ಜಿ-20 ನಾಯಕರು: ಪ್ರಧಾನಿ ಮೋದಿಯಿಂದ ಖಾದಿ ಗಿಫ್ಟ್​

ಪೆಸಿಫಿಕ್​ ಸಾಗರದ ಆಳದಲ್ಲಿ ನಿಗೂಢ ಚಿನ್ನದ ಮೊಟ್ಟೆ ಪತ್ತೆ! ಅಚ್ಚರಿಗೀಡಾದ ವಿಜ್ಞಾನಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + sixteen =
Remember me
