ಹುಬ್ಬಳ್ಳಿ:ಬಸ್‌ ಮೇಲ್ಛಾವಣಿ ಸೋರದಿದ್ದರೂ ಛತ್ರಿ ಹಿಡಿದು ಬಸ್‌ ಚಾಲನೆ ಮಾಡಿದ ಕೆಎಸ್ಸಾರ್ಟಿಸಿ ಚಾಲಕ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ ನಿರ್ವಾಹಕಿ ಅಮಾನತಾಗಿದ್ದಾರೆ. ಚಾಲಕ ಹನುಮಂತಪ್ಪ ಕಿಲ್ಲೇದಾರ ಹಾಗೂ ನಿರ್ವಾಹಕಿ ಎಚ್​.ಅನಿತಾ ಅಮಾನತಾದವರು. ಮೋಜಿಗಾಗಿ ಮಾಡಿದ ವಿಡಿಯೋ ಚಾಲಕ ಹಾಗೂ ನಿರ್ವಾಹಕರ ಸೇವೆಗೆ ಕುತ್ತು ಬರುವಂತಾಗಿದೆ.
ಇದನ್ನೂ ಓದಿ:ಇದೊಂದು ಸಾಮಗ್ರಿ ಸಾಕು ಬಾಯಿ ಹುಣ್ಣು ಸಮಸ್ಯೆ ಮಾಯ! ನಿಮ್ಮ ಮನೆಯಲ್ಲಿಯೇ ಇದೆ ಇದಕ್ಕೆ ಔಷಧ
ಮೇ 23ರಂದು ಉಪ್ಪಿನಬೆಟಗೇರಿ-ಧಾರವಾಡ ಮಾರ್ಗದಲ್ಲಿ ಬಸ್‌ ಹೋಗುತ್ತಿರುವಾಗ ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಮನರಂಜನೆಗಾಗಿ ವಿಡಿಯೋ ಮಾಡಿದ್ದಾರೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್‌ನ ವಾಸ್ತವತೆ ಕುರಿತು ವರದಿ ನೀಡಲು ವಿಭಾಗೀಯ ತಾಂತ್ರಿಕ ಅಧಿಕಾರಿಗೆ ಸೂಚಿಸಿದ್ದರು. ಅಧಿಕಾರಿಗಳು ವಾಹನ ತಪಾಸಣೆ ಮಾಡಿ, ಚಾಲಕ ಕುಳಿತುಕೊಳ್ಳುವ ಸ್ಥಳ ಅಥವಾ ಇತರೆ ಯಾವುದೇ ಭಾಗದಲ್ಲಿ ಮಳೆಯಿಂದ ಬಸ್‌ ಮೇಲ್ಛಾವಣಿ ಸೋರುತ್ತಿರಲಿಲ್ಲ ಎಂದು ವರದಿ ಸಲ್ಲಿಸಿದ್ದರು.
“ವಿಡಿಯೋ ಚಿತ್ರೀಕರಣವನ್ನು ಮೇ 23ರಂದು ಮಾಡಿದ್ದಾರೆ. ನಮ್ಮ ಗಮನಕ್ಕೆ 24ರಂದು ಬಂದಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳನ್ನು ಕರೆದು ವಾಹನ ಪರಿಶೀಲನೆಗೆ ಸೂಚಿಸಿದ್ದೆ. ವಾಹನದಲ್ಲಿ ಅಂತಹ ನ್ಯೂನತೆ ಇರಲಿಲ್ಲ ಎಂದು ವರದಿ ನೀಡಿದ್ದಾರೆ. ಚಾಲಕನನ್ನು ಕರೆಯಿಸಿ ವಿಚಾರಿಸಿದಾಗ ಮನರಂಜನೆಗಾಗಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಕೈಲಿ ಛತ್ರಿ ಹಿಡಿದು ವಾಹನ ಚಾಲನೆ ಮಾಡುವುದನ್ನು ಚಿತ್ರೀಕರಿಸಲು ನಿರ್ವಾಹಕಿ ಸಹಕರಿಸಿದ್ದಾರೆ. ಇದೆಲ್ಲದರ ಹಿಂದೆ ಸಮಸ್ಯೆ ತೋರಿಸುವುದಕ್ಕಿಂತ ಹೆಚ್ಚಾಗಿ ಸಂಸ್ಥೆ ಮಾನ ಹರಾಜು ಹಾಕುವ ದುರುದ್ದೇಶ ಅಡಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಇದು ಸಂಸ್ಥೆಯ ನಡತೆ ಮತ್ತು ಶಿಸ್ತು ನಿಬಂಧನೆಗಳು-1971 ರ 18ನೆ ನಿಬಂಧನೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ವಿಭಾಗಿಯ ನಿಯಂತ್ರಣಾಧಿಕಾರಿ( ಶಿಸ್ತು ಪಾಲನಾಧಿಕಾರಿ) ತಿಳಿಸಿರುವುದಲ್ಲದೇ ತತ್ ಕ್ಷಣಕ್ಕೆ ಅನ್ವಯವಾಗುವಂತೆ ಇಬ್ಬರನ್ನೂ ಕರ್ತವ್ಯಲೋಪದ ಆಪಾದನೆ ಮೇರೆಗೆ ಅಮಾನತುಪಡಿಸಿದ್ದಾರೆ.
ಲೋಕಸಭೆ ಚುನಾವಣೆ 6 ನೇ ಹಂತ: ಮಂದಗತಿಯಲ್ಲಿ ಮತದಾನ.. ಕಾರಣ ಇದೇ ನೋಡಿ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
