ನಾಗ್ಪುರ:ವಿ.ಡಿ.ಸಾವರ್ಕರ್​ರು ಸಮಾಜ ಸುಧಾರಕ ಹಾಗೂ ದೇಶಭಕ್ತ. ಇವರ ಹಾಗೂ ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್​ರ ಅಧ್ಯಾಯಗಳನ್ನು ಶಾಲಾ ಪಠ್ಯಕ್ರಮದಿಂದ ಕೈಬಿಟ್ಟಿರುವುದು ದುರದೃಷ್ಟಕರ ಸಂಗತಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ವೀರ್ ಸಾವರ್ಕರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಯಾರನ್ನೂ ಹೆಸರಿಸದೆ ಹೆಡ್ಗೆವಾರ್ ಮತ್ತು ಸಾವರ್ಕರ್​ರ ಅಧ್ಯಾಯಗಳನ್ನು ಶಾಲಾ ಪಠ್ಯಕ್ರಮದಿಂದ ತೆಗೆದು ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ. ಇದಕ್ಕಿಂತ ನೋವಿನ ಸಂಗತಿ ಇನ್ನೊಂದಿಲ್ಲ ಎಂದು ಹೇಳಿದರು.ಇದನ್ನೂ ಓದಿ:ನಟ ವಿಜಯ್​ ರಾಜಕೀಯ ಪ್ರವೇಶ ವಿಚಾರ: ತಮಿಳುನಾಡು ಸಿಎಂ ಪುತ್ರ ಉದಯನಿಧಿ ಪ್ರತಿಕ್ರಿಯೆ ವೈರಲ್​
ದೇಶಕ್ಕಾಗಿ ಎಲ್ಲವನ್ನೂ ನೀಡಿದ ವ್ಯಕ್ತಿ ಸಾವರ್ಕರ್​ ಹಾಗೂ ಅವರ ಕುಟುಂಬವು ಅವಮಾನಗಳನ್ನು ಎದುರಿಸಬೇಕಾಗಿದೆ.ಸಾವರ್ಕರ್​ರು ಸಮಾಜ ಸುಧಾರಕರಾಗಿದ್ದು, ಅವರು ನಮಗೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.
ಸಾವರ್ಕರ್ ಮತ್ತು ಸ್ವಾಮಿ ವಿವೇಕಾನಂದರು ಪ್ರಚಾರ ಮಾಡಿದ ಭಾರತೀಯ ಮತ್ತು ಹಿಂದೂ ಸಂಸ್ಕೃತಿ ಒಂದೇ ಆಗಿದ್ದು, ಯುವ ಪೀಳಿಗೆಗೆ ಅವರ ಸಿದ್ಧಾಂತ ಮತ್ತು ದೇಶಕ್ಕಾಗಿ ಸಾವರ್ಕರ್ ಮಾಡಿದ ತ್ಯಾಗದ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಇತ್ತೀಚೆಗೆ ಶಾಲಾ ಪಠ್ಯಪುಸ್ತಕಗಳಿಂದ ಸಾವರ್ಕರ್ ಮತ್ತು ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ತೆಗೆದುಹಾಕುವ ಮೂಲಕ ಈ ವಿಷಯ ಕುರಿತ ಚರ್ಚೆಗೆ ನಾಂದಿ ಹಾಡಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + seventeen =
Remember me
