ನವದೆಹಲಿ:ಕೇಂದ್ರ ಸರ್ಕಾರ ಏಕಾಏಕಿ ಲಾಕ್​ ಡೌನ್​ ಮಾಡಿದ್ದನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.
ಕರೊನಾ ವೈರಸ್​ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹೀಗೆ ಲಾಕ್​ಡೌನ್​ ಮಾಡಿದ್ದು ಸರಿಯಲ್ಲ. ಇದರಿಂದ ಜನರು ತೀವ್ರ ಗಾಬರಿ, ಗೊಂದಲಕ್ಕೀಡಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಹುಲ್​ ಗಾಂಧಿ ಪತ್ರ ಬರೆದು ಕೆಲವು ಸಲಹೆಗಳನ್ನು ನೀಡಿದ್ದಾರೆ. ಲಾಕ್​ಡೌನ್​ನಿಂದ ಬಡವರ ಪರಿಸ್ಥಿತಿ ತೀರ ಹದಗೆಟ್ಟಿದೆ. ಜೀವನ ನಡೆಸುವುದೇ ದುಸ್ತರವಾಗಿದೆ. ಹಾಗಾಗಿ ಈ ಮಾರಣಾಂತಿಕ ರೋಗ ನಿಯಂತ್ರಣಕ್ಕೆ ಲಾಕ್​ಡೌನ್​ ಬಿಟ್ಟು ಬೇರೆ ಏನಾದರೂ ಕ್ರಮ ಕೈಗೊಳ್ಳಿ ಎಂದು ರಾಹುಲ್​ ಗಾಂಧಿ ತಿಳಿಸಿದ್ದಾರೆ.
ಉಳಿದ ರಾಷ್ಟ್ರಗಳಂತೆ ಭಾರತ ಅಲ್ಲ. ನಮ್ಮ ದೇಶದ ಪರಿಸ್ಥಿತಿ ವಿಭಿನ್ನವಾಗಿದೆ. ಇಲ್ಲಿ ಲಾಕ್​ಡೌನ್​ ಮಾಡುವುದು ಸುಲಭವಲ್ಲ. ಹಾಗಾಗಿ ಬೇರೆ ಏನಾದರೂ ಮಾರ್ಗ ಕಂಡುಕೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಭಾರತದಲ್ಲಿ ಅನೇಕ ಬಡ ಜನರು ತಮ್ಮ ದಿನಗೂಲಿ ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಲಾಕ್​ಡೌನ್​ ಆದರೆ ಅವರೆಲ್ಲರೂ ಹೊಟ್ಟೆಗಿಲ್ಲದೆ ಕಷ್ಟಪಡಬೇಕಾಗುತ್ತದೆ. ಆರ್ಥಿಕ ಚಟುವಟಿಕೆ ಸ್ಥಗಿತಗೊಂಡರೆ ಕರೊನಾ ವೈರಸ್​ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ ಬಡ ಜನರು ಹಸಿವಿನಿಂದ, ಹತಾಶೆಯಿಂದ ಸಾಯುವ ಪ್ರಮಾಣ ಹೆಚ್ಚಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಕಾರ್ಖಾನೆಗಳು, ಸಣ್ಣ ಉದ್ದಿಮೆಗಳು ಬಂದ್ ಆಗಿವೆ. 10, 000ಕ್ಕೂ ಅಧಿಕ ವಲಸೆ ಕಾರ್ಮಿಕರು ತಮ್ಮ ಮನೆಗಳತ್ತ ಧಾವಿಸುತ್ತಿದ್ದಾರೆ. ಅಂತವರಿಗೆ ಆಶ್ರಯ ಒದಗಿಸಬೇಕು. ಅವರ ಬ್ಯಾಂಕ್​ ಖಾತೆಗಳಿಗೆ ನೇರವಾಗಿ ಹಣ ಹಾಕಬೇಕು. ಮೂಲ ಸೌಕರ್ಯ ಒದಗಿಸಬೇಕು ಎಂದಿದ್ದಾರೆ. ಅದರೊಂದಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. (ಏಜೆನ್ಸೀಸ್​)
Congress MP Rahul Gandhi writes to Prime Minister Narendra Modi offering suggestions on#COVID19. Gandhi says 'we stand together with the government in fighting and overcoming this tremendous challenge'pic.twitter.com/nIUz2koIzy
— ANI (@ANI)March 29, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 10 =
Remember me
