ಭುವನೇಶ್ವರ್​:ಬೆದರಿಕೆ ಒಡ್ಡಿ ಅನೇಕ ಹೈ ಪ್ರೊಫೈಲ್​ ಜನರ ಬಳಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಹಿಳಾ ಬ್ಲಾಕ್​ಮೇಲರ್​ ಅರ್ಚನಾ ನಾಗ್​ ಎಂಬಾಕೆಯನ್ನು ಒಡಿಶಾ ಪೊಲೀಸರು ಬಂಧಿಸಿದ್ದು, ಇದೀಗ ಆಕೆಯ ಕುರಿತು ಪ್ರತಿದಿನ ಸಾಕಷ್ಟು ಸಂಗತಿಗಳು ಬೆಳಕಿಗೆ ಬರುತ್ತಿವೆ.
ಅರ್ಚನಾಳ ಹನಿಟ್ರ್ಯಾಪ್​ ಮತ್ತು ಹಣ ಸುಲಿಗೆ ಪ್ರಕರಣದ ತನಿಖೆ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಹ ಸೇರಿಕೊಂಡಿದೆ. ಅರ್ಚನಾಳ ಹಣದ ವ್ಯವಹಾರವನ್ನು ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಆಕೆಯ ಹಣದ ವರ್ಗಾವಣೆ ಮಾಹಿತಿ ನೋಡಿ ದಂಗಾಗಿದ್ದಾರೆ.
ಒಡಿಶಾ ಹೊರಗಡೆ ಇರುವ ಅನೇಕ ಕಂಪನಿಗಳ ಜೊತೆ ಅರ್ಚನಾಗೆ ಸಂಪರ್ಕ ಇರುವುದಾಗಿ ತಿಳಿದುಬಂದಿದೆ. ಅರ್ಚನಾಳ ಸರಣಿ ಹಣಕಾಸಿನ ವಹಿವಾಟುಗಳನ್ನು ಇಡಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ದೆಹಲಿ ಮತ್ತು ಮುಂಬೈನಲ್ಲಿರುವ ಕಂಪನಿಗಳ ನಡುವೆ ಭಾರಿ ಮೊತ್ತದ ವಹಿವಾಟು ನಡೆದಿರುವುದಾಗಿ ಇಡಿ ಮೂಲಗಳು ತಿಳಿಸಿವೆ.
ತನಿಖೆಯ ಸಂದರ್ಭದಲ್ಲಿ ಇಡಿ ಅಧಿಕಾರಿಗಳು ಅರ್ಚನಾ ನಾಗ್ ಅವರ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದ ಹಲವಾರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅರ್ಚನಾಳ ಎಟಿಎಂ ಕಾರ್ಡ್‌ನಿಂದ ಹಲವಾರು ಸಂದರ್ಭಗಳಲ್ಲಿ ಭಾರಿ ಮೊತ್ತದ ಹಣ ಜಮಾ ಆಗಿರುವುದನ್ನು ತನಿಖಾ ತಂಡ ಪತ್ತೆ ಮಾಡಿದೆ.
ಸದ್ಯ ಕಂಪನಿಗಳೊಂದಿಗೆ ಅರ್ಚನಾಳ ಸಂಬಂಧ ಮತ್ತು ಹಣಕಾಸಿನ ವಹಿವಾಟಿನ ಉದ್ದೇಶವನ್ನು ತಿಳಿಯಲು ಇಡಿ ಅಧಿಕಾರಿಗಳಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ.
ಯಾರು ಈ ಅರ್ಚನಾ?26 ವರ್ಷದ ಅರ್ಚನಾ ಓರ್ವ ಬ್ಲಾಕ್​ಮೇಲರ್​. ಈಕೆಯ ಹನಿಟ್ರ್ಯಾಪ್​ ಬಲೆಗೆ ಬಿದ್ದ ರಾಜಕಾರಣಿಗಳು, ಉದ್ಯಮಿಗಳು ಮತ್ತು ಸಿನಿಮಾ ನಿರ್ಮಾಪಕರು ಸೇರಿದಂತೆ ಪ್ರಭಾವಿಗಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವುದಾಗಿ ಬೆದರಿಸಿ, ಹಣ ಸುಲಿಗೆ ಮಾಡುವುದೇ ಈಕೆಯ ನಿತ್ಯದ ಕೆಲಸವಾಗಿತ್ತು. ಒಡಿಶಾದ ಚಲನಚಿತ್ರ ನಿರ್ಮಾಪಕ ಅಕ್ಷಯ್ ಪಾರಿಜಾ ಅವರನ್ನು ಹನಿಟ್ರ್ಯಾಪ್​ ಬಲೆಗೆ ಬೀಳಿಸುವ ಅರ್ಚನಾರ ಯೋಜನೆ ವಿಫಲವಾದ ಬಳಿಕ ಆಕೆ ಪೊಲೀಸರ ಅತಿಥಿಯಾಗಿದ್ದು, ಆಕೆಯ ಎಲ್ಲ ಪುರಾಣಗಳು ಇದೀಗ ಬಯಲಾಗುತ್ತಿದೆ.
ಅಂದಹಾಗೆ ಅರ್ಚನಾ ನಾಗ್​, 18 ಶಾಸಕರು ಸೇರಿದಂತೆ 25 ಪ್ರಭಾವಿಗಳನ್ನು ತನ್ನ ಹನಿಟ್ರ್ಯಾಪ್​ ಬಲೆಗೆ ಕಡೆವಿರುವುದಾಗಿ ತಿಳಿದುಬಂದಿದೆ. ಈ ವಿಚಾರ ಇದೀಗ ಒಡಿಶಾ ರಾಜ್ಯ ರಾಜಕೀಯದಲ್ಲಿ ಭಾರಿ ತಲ್ಲಣ ಉಂಟು ಮಾಡಿದೆ. ಹನಿಟ್ರ್ಯಾಪ್​ಗೆ ಒಳಗಾದ ಶಾಸಕರಲ್ಲಿ ಬಹುತೇಕರು ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ ನೇತೃತ್ವದ ಬಿಜೆಡಿ ಸರ್ಕಾರದ ಸದಸ್ಯರಾಗಿದ್ದಾರೆ. 2018 ರಿಂದ 2022 ರವರೆಗಿನ ಕೇವಲ ನಾಲ್ಕು ವರ್ಷಗಳ ಅವಧಿಯಲ್ಲಿ ಅರ್ಚನಾ ಮತ್ತು ಆಕೆಯ ಪತಿ ಜಗಬಂಧು 30 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಗಳಿಸಿದ್ದಾರೆ. ಅರ್ಚನಾ ಹೆಸರಿನಲ್ಲಿ ಮೂರು ಅಂತಸ್ತಿನ ಅರಮನೆಯಂತಹ ಬಂಗಲೆ ಇದೆ. ಮನೆಯಲ್ಲಿ ಪೀಠೋಪಕರಣಗಳ ಬೆಲೆ 40 ಲಕ್ಷ ರೂ. ಎಂಬುದು ಅಚ್ಚರಿಯ ಸಂಗತಿ.(ಏಜೆನ್ಸೀಸ್​)
ಹನಿಟ್ರ್ಯಾಪ್​ ಕ್ವೀನ್​ ಅರ್ಚನಾಳ ಐಷಾರಾಮಿ ಮನೆ ಪ್ರವೇಶಿಸಿದ ಪೊಲೀಸರಿಗೆ ಕಾದಿತ್ತು ಸಾಕಷ್ಟು ಅಚ್ಚರಿಗಳು!

ಕಡು ಬಡತನದಲ್ಲಿ ಹುಟ್ಟಿ 30 ಕೋಟಿ ರೂ. ಬೆಲೆ ಬಾಳುವ ಆಸ್ತಿ ಗಳಿಸಿದ್ಹೇಗೆ? ಕಿಲಾಡಿ ಲೇಡಿಯ ಹಿನ್ನೆಲೆ ತಿಳಿದ್ರೆ ದಂಗಾಗ್ತೀರಾ!

ಅರ್ಚನಾ ನಾಗ್ ಹನಿಟ್ರ್ಯಾಪ್​ ಕೇಸ್​: ಸಾಲದ ಹಣ ವಾಪಸ್​ ಕೇಳಿದ ಉದ್ಯಮಿಗೆ ಈಕೆ ಕೊಟ್ಟಿದ್ದಳು ಬಿಗ್​ ಶಾಕ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
