ವಾರಣಾಸಿ:ಅಣ್ಣನ ಹುಟ್ಟುಹಬ್ಬದಂದು ತರಾತುರಿಯಲ್ಲಿ ಕೇಕ್ ತಿಂದು ಎಂಟು ವರ್ಷದ ಬಾಲಕ ಪ್ರಾಂಜಲ್ ಶ್ರೀವಾಸ್ತವ್ ಸಾವನ್ನಪ್ಪಿದ್ದಾನೆ. ಶ್ವಾಸನಾಳವನ್ನು ತಲುಪಿದ ನಂತರ ಕೇಕ್ ಸಿಲುಕಿಕೊಂಡಿದ್ದು, ಮಗುವಿನ ಆರೋಗ್ಯ ಹದಗೆಟ್ಟಾಗ, ಸಂಬಂಧಿಕರು ಅವನನ್ನು ನಾಲ್ಕು ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.
ಘಟನೆಯ ವಿವರಹುಟ್ಟುಹಬ್ಬದ ಆಚರಣೆಯ ಸಂಭ್ರಮದಲ್ಲಿದ್ದ ಇಡೀ ಕುಟುಂಬವು ಈಗ ದುಃಖದಲ್ಲಿ ಮುಳುಗಿದೆ. ಸೋಮವಾರ ಜನ್ಸಾ ಪೊಲೀಸ್ ಠಾಣೆ ವ್ಯಾಪ್ತಿಯ, ಸಜೋಯಿ ಗ್ರಾಮದ ಶಿಕ್ಷಕ ಧೀರಜ್ ಶ್ರೀವಾಸ್ತವ ಅವರ ಹಿರಿಯ ಪುತ್ರ ಪ್ರಖರ್ ಅವರ ಜನ್ಮದಿನ. ತಡರಾತ್ರಿ ಕೇಕ್ ಕತ್ತರಿಸಿದ ಬಳಿಕ ಕಿರಿಯ ಸಹೋದರ ಪ್ರಾಂಜಲ್ ಕೇಕ್ ತಿಂದಾಗ ಆರೋಗ್ಯ ಹದಗೆಡತೊಡಗಿತು.
ಸಂಬಂಧಿಕರು ರಾತ್ರಿ ಒಂದು ಗಂಟೆಗೆ ಸಾಯಿ ನರ್ಸಿಂಗ್ ಹೋಮ್‌ಗೆ ಕರೆದೊಯ್ದರು. ಆ ನಂತರ ಚೈಲ್ಡ್ ಕೇರ್ ಆಸ್ಪತ್ರೆ, ಕೊನೆಗೆ ಹೆರಿಟೇಜ್ ಆಸ್ಪತ್ರೆಗೆ ಕರೆದೊಯ್ದರು. ಕೊನೆಯಲ್ಲಿ ಜನಪ್ರಿಯ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಆದರೆ ಮಂಗಳವಾರ ಬೆಳಗ್ಗೆ 9 ಗಂಟೆಯವರೆಗೆ ಬಾಲಕನನ್ನು ರಕ್ಷಿಸಲು ನಡೆಸಿದ ಪ್ರಯತ್ನಗಳು ವ್ಯರ್ಥವಾಗಿದೆ.
“ನನ್ನ ಮಗನ ಶ್ವಾಸನಾಳಕ್ಕೆ ಕೇಕ್ ತಗುಲಿ ಉಸಿರಾಟದ ತೊಂದರೆಯಾಗಿ ಸಾವನ್ನಪ್ಪಿದ್ದಾನೆ” ಎಂದು ತಂದೆ ಧೀರಜ್ ತಿಳಿಸಿದ್ದಾರೆ. ಇಬ್ಬರು ಸಹೋದರರಲ್ಲಿ ಕಿರಿಯವನಾದ ಪ್ರಾಂಜಲ್ ಜ್ಞಾನದಾಯಿನಿ ಮಕ್ಕಳ ಶಾಲೆಯಲ್ಲಿ ಓದುತ್ತಿದ್ದನು. ಪ್ರಾಂಜಲ್ ತಾಯಿ ಮತ್ತು ಇತರ ಸಂಬಂಧಿಕರ ಅಳಲು ಮುಗಿಲು ಮುಟ್ಟಿದೆ.
ಮಹಿಳಾ ಪೇದೆ ಸ್ನಾನ ಮಾಡುವುದನ್ನು ರಹಸ್ಯವಾಗಿ ವಿಡಿಯೋ ಮಾಡಿದ ಟ್ರೇನಿ ಕಾನ್‌ಸ್ಟೆಬಲ್; ಎಫ್‌ಐಆರ್ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
