ನವದೆಹಲಿ:ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್​ ಸದಸ್ಯತ್ವದಿಂದ ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿ ಅನರ್ಹಗೊಂಡಿದ್ದು ಅವರು ಪ್ರತಿನಿಧಿಸುವ ವಯನಾಡ್​ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಚುನಾವಣಾ ಆಯೋಗದ ಮುಂದೆ ಯಾವುದೇ ಪ್ರಸ್ತಾಪವಿಲ್ಲ ಎಂದು ಆಯೋಗ ಹೇಳಿದೆ.
ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ರಾಜೀವ್​ ಕುಮಾರ್​ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​ ನ್ಯಾಯಾಲಯವು ರಾಹುಲ್​ ಗಾಂಧಿ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ. ನ್ಯಾಯಾಲಯದ ಮುಂದಿನ ಆದೇಶದವರೆಗೂ ಕಾಯುತ್ತೇವೆ ಆ ನಂತರ ಆಯೋಗ ತನ್ನ ನಿರ್ಧಾರವನ್ನ ತಿಳಿಸಲಿದೆ ಎಂದು ಹೇಳಿದ್ದಾರೆ.
ವಯನಾಡು​ ಲೋಕಸಭೆ ಕ್ಷೇತ್ರ ತೆರವಾಗಿರುವ ಬಗ್ಗೆ ಮಾರ್ಚ್​ 23ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಕಾನೂನಿನ ಪ್ರಕಾರ ಸ್ಥಾನ ತೆರವಾದ ಆರು ತಿಂಗಳೊಳಗೆ ಉಪಚುನಾವಣೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ
ಹಾಲಿ ಸದಸ್ಯರ ಅವಧಿಯೂ ಒಂದು ವರ್ಷಕ್ಕಿಂತ ಕಡಿಮೆ ಇದ್ದರೆ ಉಪಚುನಾವಣೆ ನಡೆಸುವಂತಿಲ್ಲ. ಆದರೆ, ವಯನಾಡ್​ ಲೋಕಸಭೆ ಸದಸ್ಯರ ಅವಧಿಯೂ ಇನ್ನು ಒಂದು ವರ್ಷಕ್ಕಿಂತ ಹೆಚ್ಚಿರುವ ಕಾರಣ ನ್ಯಾಯಾಲಯದ ಮುಂದಿನ ಆದೇಶವನ್ನು ಗಮನದಲ್ಲಿಟ್ಟುಕೊಂಡು ಉಪಚುನಾವಣೆ ಘೋಷಿಸಲಾಗುವುದು ಎಂದು ಮುಖ್ಯ ಚುನಾವಣಾ ಅಧಿಕಾರಿ ರಾಜೀವ್​ ಕುಮಾರ್​ ಸುದ್ಧಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್​ ಗಾಂಧಿ ಆವರನ್ನು ಸೂರತ್​ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಲೋಕಸಭೆ ಕಾರ್ಯದರ್ಶಿ ಅವರನ್ನು ಸಂಸತ್​ ಸದಸ್ಯತ್ವದಿಂದ ಅನರ್ಹಗೊಳಿಸಿದ ಬೆನ್ನಲ್ಲೇ ವಯನಾಡು ಲೋಸಭೆ ಕ್ಷೇತ್ರ ತೆರವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + ten =
Remember me
