
ನವದೆಹಲಿ: ಅರ್ಬನ್ ಕೋ ಆಫರೇಟಿವ್ ಬ್ಯಾಂಕು​ಗಳ ಪ್ರಸ್ತುತ ಸ್ಥಿತಿಗತಿಯ ಕುರಿತಂತೆ ಹಾಗೂ ಆಗಬೇಕಾದ ಬದಲಾವಣೆಯ ಕುರಿತಂತೆ ಅಧ್ಯಯನ ನಡೆಸಲು ರಿಸರ್ವ್ ಬ್ಯಾಂಕ್ (ಆರ್​ಬಿಐ) ತಜ್ಞರ ಸಮಿತಿಯೊಂದನ್ನು ಸೋಮವಾರ ರಚಿಸಿದೆ.
ಈ ಸಮಿತಿಗೆ ರಿಸರ್ವ್ ಬ್ಯಾಂಕ್​ನ ಉಪ ಗವರ್ನರ್ ಎನ್​ ಎಸ್​ ವಿಶ್ವನಾಥನ್ ಅಧ್ಯಕ್ಷರಾಗಿರಲಿದ್ದಾರೆ. ಈ ಸಮಿತಿಯು ಅರ್ಬನ್ ಬ್ಯಾಂಕುಗಳ ಸ್ಥಿತಿಗತಿಯಷ್ಟೇ ಅಲ್ಲದೇ ಅವುಗಳ ಮುಂದಿನ ಹಾದಿಯ ಬಗ್ಗೆಯೂ ಅಧ್ಯಯನ ನಡೆಸಲಿದೆ.
ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಅರ್ಬನ್ ಬ್ಯಾಂಕುಗಳ ಕಾರ್ಯವೈಖರಿ ಬಗ್ಗೆ ಅನೇಕ ಆರೋಪಗಳು ಕೇಳಿ ಬರುತ್ತೀವೆ. ಹಣಕಾಸಿನ ದುರುಪಯೋಗ ಹಾಗೂ ಅಧಿಕಾರದ ದುರಪಯೋಗ ಅವುಗಳಲ್ಲಿ ಕಂಡು ಬರುತ್ತಿದೆ. ಇದೇ ಆರೋಪದ ಮೇಲೆ ಆರ್​ಬಿಐ ಇತ್ತೀಚಿಗಷ್ಟೇ ದೇಶದ ಮೂರು ಅರ್ಬನ್ ಬ್ಯಾಂಕುಗಳ ಕಾರ್ಯಾಚರಣೆ ಮೇಲೆ ನಿಷೇಧ ಹೇರಿತ್ತು.
ಕಳೆದ ಐದು ವರ್ಷಗಳಲ್ಲಿ ಅರ್ಬನ್ ಬ್ಯಾಂಕುಗಳಲ್ಲಿ ಆದ ಬದಲಾವಣೆಯನ್ನು ಗಮನವಾಗಿಟ್ಟುಕೊಂಡು ಸಮಿತಿ ಅಧ್ಯಯನ ನಡೆಸಲಿದ್ದು, ಒಂದು ವರ್ಷದೊಳಗೆ ಆಗಬೇಕಾದ ಬದಲಾವಣೆಯ ಕುರಿತು ವರದಿ ನೀಡಲಿದೆ. ಠೇವಣಿದಾರರ ಹಿತ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರ್​ಬಿಐ ಹೇಳಿದೆ.(ಏಜೇನ್ಸಿಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − thirteen =
Remember me
