ನವದೆಹಲಿ:ಕರೊನಾ ವೈರಸ್​ ಸಾಂಕ್ರಾಮಿಕ ರೋಗದ ಎರಡನೇ ಅಲೆ ದೆಹಲಿಯಲ್ಲಿ ಸದ್ಯದ ಮಟ್ಟಿಗೆ ಉತ್ತುಂಗ ತಲುಪಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಕರೊನಾ ಎರಡನೇ ಅಲೆ ರಾಷ್ಟ್ರ ರಾಜಧಾನಿಯಲ್ಲಿ ಈಗ ಉತ್ತುಂಗದಲ್ಲಿದೆ. ಆದರೆ ಮುಂಬರುವ ದಿನಗಳಲ್ಲಿ ಇದು ಕಡಿಮೆಯಾಗುತ್ತ ಬರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ಕೇಜ್ರಿವಾಲ್​ ತಿಳಿಸಿದ್ದಾರೆ.ದೆಹಲಿಯಲ್ಲಿ ಕರೊನಾ ಸಾಂಕ್ರಾಮಿಕ ತಡೆಗಟ್ಟಲು ಕೇಂದ್ರ ಸರ್ಕಾರ ತುಂಬ ಸಹಕಾರ ನೀಡಿದೆ. ಹಾಗೇ ದೆಹಲಿಯ ಜನರೂ ಸಹಕರಿಸಿದ್ದಾರೆ. ಅವರಿಗೆಲ್ಲ ಧನ್ಯವಾದ ಹೇಳುತ್ತೇನೆ ಎಂದರು.ಇದನ್ನೂ ಓದಿ:ಬ್ಯಾಂಕ್​ ದರೋಡೆಕೋರರ ಚಾಲಕಿತನದಿಂದ ಕಂಗೆಟ್ಟ ಪೊಲೀಸರು: ಸಿಸಿಟಿವಿ ವೀಕ್ಷಿಸಿದವರಿಗೆ ಕಾದಿತ್ತು ಶಾಕ್​!
ಹಾಗೇ ಪ್ರಧಾನಿ ನರೇಂದ್ರ ಮೋದಿಯರು ನಡೆಸಿದ ಕೋವಿಡ್​-19 ಪರಿಸ್ಥಿತಿ ಅವಲೋಕನಾ ಸಭೆ ತುಂಬ ಫಲಕಾರಿಯಾಗಿದೆ ಎಂದೂ ದೆಹಲಿ ಸಿಎಂ ಹೇಳಿದರು.ದೆಹಲಿಯಲ್ಲಿ 2,56,789 ಕರೊನಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, 5,087 ಮಂದಿ ಕರೊನಾಕ್ಕೆ ಬಲಿಯಾಗಿದ್ದಾರೆ.
ಬುಧವಾರ ಒಂದೇ ದಿನ 3,714 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದೆ. 36 ಮಂದಿ ಸಾವನ್ನಪ್ಪಿದ್ದಾರೆ. (ಏಜೆನ್ಸೀಸ್​)
ಬೆಂಗಳೂರಿಗೆ ಬರೋರು, ಬೆಂಗಳೂರಿಂದ ಬೇರೆ ಊರಿಗೆ ಹೋಗೋರು ನಾಳೆ ಹುಷಾರು!

ಮಣ್ಣಲ್ಲಿ ಮಣ್ಣಾದ ಸುರೇಶ್​ ಅಂಗಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
