ಪಟ್ನಾ:ಆಘಾತಕಾರಿ ಘಟನೆಯೊಂದರಲ್ಲಿ 45 ವರ್ಷದ ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಆಕೆಯ ಕಣ್ಣು ಕಿತ್ತು ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯ ಪಸ್ರಾಹ ಗ್ರಾಮದಲ್ಲಿ ನಡೆದಿದೆ.
ಮೃತರನನ್ಉ ಸುಲೇಖಾ ದೇವಿ(45) ಎಂದು ಗುರುತಿಸಲಾಗಿದ್ದು, ದುಷ್ಕರ್ಮಿಗಳು ಆಕೆಯ ಕಣ್ಣನ್ನು ಕಿತ್ತು ಹಾಕಿ, ನಾಲಿಗೆಯನ್ನು ಕತ್ತರಿಸಿ ಖಾಸಗಿ ಅಂಗಗಳನ್ನು ವಿರೂಪಗಳಿಸಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ SDPO ಮನೋಜ್​ ಕುಮಾರ್,​ ಸುಲೇಖಾ ದೇವಿ ಅವರು ಎಂದಿನಂತೆ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಮೇಲೆ ದಾಳಿ ಮಾಡಿದ್ದು, ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಭೂ ವ್ಯಾಜ್ಯ ಸಂಬಂಧ ಹತ್ಯೆ ನಡೆದಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. 2014ರಲ್ಲಿ ಆಕೆಯ ಪತಿ ಹಾಗೂ ಬಾಮೈದುನನ್ನು ಇದೇ ರೀತಿ ಹತ್ಯೆ ಮಾಡಲಾಗಿತ್ತು. ಕೊಲೆ ಆರೋಪಿಯೂ ಕಳೆದ ವರ್ಷ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಆತನ ಮೇಲು ಸಂಶಯವಿದ್ದು ಈ ಕುರಿತು ವಿಚಾರಿಸಲಾಗುತ್ತಿದೆ.
ಇದನ್ನೂ ಓದಿ:ಮಾನಸಿಕ ಖಿನ್ನತೆ; ನದಿಗೆ ಹಾರಿ ಸ್ವಾಮೀಜಿ ಸಾವು
ಈ ಕುರಿತು ವಿಶೇಷ ತಂಡ ಒಂದನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು SDPO ಮನೋಜ್​ ಕುಮಾರ್​ ತಿಳಿಸಿದ್ದಾರೆ.
ಸುಲೇಖಾ ಹತ್ಯೆಯನ್ನು ಖಂಡಿಸಿ ಪಸ್ರಾಹ ಗ್ರಾಮದ ನಿವಾಸಿಗಳು ಹಾಗೂ ಮೃತ ಮಹಿಳೆಯ ಸಂಬಂಧಿಕರು ಪೊಲೀಸ್​ ಠಾಣೆ ಹಾಗೂ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ದೌಡಾಯಿಸಿದ ಹಿರಿಯ ಪೊಲೀಸ್​ ಅಧಿಕಾರಿಗಳ ತಂಡ ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
