ಹೈದರಾಬಾದ್:ಆಂಧ್ರ ಪ್ರದೇಶ ಚುನಾವಣೆ ಸನಿಹ ಬಂದಿದ್ದು, ರಾಜಕೀಯದ ಜೊತೆಗೆ ಸಿನಿಮಾ ರಾಜಕೀಯವೂ ಜೋರಾಗಿ ನಡೆಯುತ್ತಿದೆ. ಒಂದು ಪಕ್ಷದವರು, ಎದುರಾಳಿ ಪಕ್ಷದವರನ್ನು ಹೀಗಳೆಯಲು, ಎದುರಾಳಿಗಳ ವಿರುದ್ಧ ಜನಾಭಿಪ್ರಾಯ ರೂಪಿಸಲು ಸಿನಿಮಾಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದ್ದಾರೆ. ಆಂಧ್ರ ಸಿಎಂ ಜಗನ್ ಪರವಾಗಿ ಈ ಕಾರ್ಯ ಹೆಚ್ಚು ನಡೆಯುತ್ತಿದೆ. ಅದರ ಭಾಗವಾಗಿಯೇ ಈಗ ಜಗನ್ ಜೀವನ ಆಧರಿಸಿದ ‘ಯಾತ್ರ 2’ ಸಿನಿಮಾ ಗುರುವಾರ ರಿಲೀಸ್​ ಆಗಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ಸಿನಿಮಾಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ ಎನ್ನಲಾಗಿದೆ.
ಇದನ್ನೂ ಓದಿ:ವಿರುಷ್ಕಾ ದಂಪತಿಗೆ 2ನೇ ಮಗು ಸುಳ್ಳು ಮಾಹಿತಿ ಹರಡಿ ದೊಡ್ಡ ತಪ್ಪು ಮಾಡಿದೆ: ಎಬಿಡಿ
ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಥಿಯೇಟರ್ ವೊಂದರಲ್ಲಿ ಅಭಿಮಾನಿಗಳ ನಡುವೆ ವಾಗ್ವಾದ ಉಂಟಾದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಟ ಕಂ ರಾಜಕಾರಣಿ ಪವನ್ ಕಲ್ಯಾಣ್ ಹಾಗೂ ಆಂಧ್ರ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಅಭಿಮಾನಿಗಳ ನಡುವೆ ಈ ಜಗಳ ನಡೆದಿದೆ.
Reportedly, Fans of#YSJaganand#PawanKalyanclashed during the screening of#Yatra2at Prasads, Hyderabad.pic.twitter.com/USWM6BsUxK
— Gulte (@GulteOfficial)February 8, 2024

ಹೈದರಾಬಾದ್‌ನ ಪ್ರಸಾದ್ ಥಿಯೇಟರ್‌ನಲ್ಲಿ ಈ ಮಾರಾಮಾರಿ ನಡೆದಿದೆ. ಎರಡೂ ಕಡೆ ಅಭಿಮಾನಿಗಳ ನಡುವೆ ವಾಗ್ವಾದ ಉಂಟಾಗಿದೆ. ಪಕ್ಷ ಒಬ್ಬರನ್ನೊಬ್ಬರು ದೂಡಿಕೊಂಡಿದ್ದಾರೆ. ಗಲಾಟೆಗೆ ಏನು ಕಾರಣ ಎನ್ನುವುದು ಇದುವರೆಗೆ ತಿಳಿದು ಬಂದಿಲ್ಲ.
ರಾಜಕೀಯವಾಗಿ ಜಗನ್ ಹಾಗೂ ಪವನ್ ಕಲ್ಯಾಣ್ ನಡುವೆ ಪೈಪೋಟಿ ಇದೆ. ಈ ಎರಡು ನಾಯಕರ ನಡುವಿನ ಪೈಪೋಟಿ ಆಂಧ್ರ ರಾಜಕೀಯದಲ್ಲಿ ಹೊಸದಮಹಿ ವಿ ರಾಘವ್ ನಿರ್ದೇಶನದಲ್ಲಿ 2019 ರಲ್ಲಿ ‘ಯಾತ್ರಾ’ ಸಿನಿಮಾ ಬಂದಿತ್ತು. ಈ ಸಿನಿಮಾ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಜೀವನವನದ ಕಥೆಯನ್ನೊಳಗೊಂಡಿದೆ. ಈಗ ಬಂದಿರುವ ‘ಯಾತ್ರಾ-2’ ಸಿನಿಮಾ ಆಂಧ್ರ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಬಯೋಪಿಕ್ ಆಗಿದೆ. ಈ ಸಿನಿಮಾದಲ್ಲಿ ಜೀವಾ ಮತ್ತು ಮಮ್ಮುಟ್ಟಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.
ಈ ಎರಡೂ ಸಿನಿಮಾಗಳು ಆಂಧ್ರಪ್ರದೇಶದ ರಾಜಕೀಯದಲ್ಲಿನ ಈ ಪ್ರಭಾವಿ ವ್ಯಕ್ತಿಗಳ ರಾಜಕೀಯ ಪ್ರಯಾಣ ಮತ್ತು ಜೀವನದ ಪ್ರಮುಖ ಘಟನೆಗಳನ್ನು ಒಳಗೊಂಡಿದ್ದು, ರಾಜಕೀಯವಾಗಿಯೂ ಸದ್ದು ಮಾಡಿದೆ.
ಈ ನಡುವೆ 2012 ರಲ್ಲಿ ತೆರೆಕಂಡು ರಾಜಕೀಯವಾಗಿ ಭಾರೀ ವಿವಾದಕ್ಕೆ ಕಾರಣವಾಗಿದ್ದ, ಪವನ್ ಕಲ್ಯಾಣ್ ಅವರ ‘ಕ್ಯಾಮೆರಾಮ್ಯಾನ್ ಗಂಗತೋ ರಾಂಬಾಬು’ ಸಿನಿಮಾವನ್ನು ಆಂಧ್ರದ ಕೆಲವಡೆ ಮರು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾ ಅಂದು ಸಿಎಂ ವೈಎಸ್ ರಾಜಶೇಖರ ರೆಡ್ಡಿ ಅವರ ಅಧಿಕಾರದ ಅವಧಿಯಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಇಲ್ಲಿ ಹೇಳಿದ ಕೆಲ ವಿಚಾರಗಳು ಸಿಎಂ ಅವರಿಗೆ ಅಪಮಾನ ಮಾಡಿದ್ದಂತೆ ಇತ್ತು ಎನ್ನುವ ಕಾರಣಕ್ಕೆ ಸಿನಿಮಾ ಬ್ಯಾನ್ ಗೆ ಕೂಗು ಕೇಳಿ ಬಂದಿತ್ತು. ಕೊನೆಗೂ ಒಂದಷ್ಟು ಸೀನ್ ಹಾಗೂ ಡೈಲಾಗ್ ಗಳ ಕಡಿತದಿಂದ ಸಿನಿಮಾವನ್ನು ರಿಲೀಸ್ ಮಾಡಲಾಗಿತ್ತು.
5 ಕೋಟಿ ಕೊಟ್ಟರೆ ಸಿನಿಮಾ ಮಾಡ್ತೀನಿ ಎಂದ ಕೊಡಗಿನ ಕುವರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 8 =
Remember me
