ನವದೆಹಲಿ:ಗಣರಾಜ್ಯೋತ್ಸವದಂದು ಕೆಂಪು ಕೋಟೆಯ ಮೇಲೆ ದಾಳಿ ನಡೆಸಿ, ಹಿಂಸಾಚಾರಕ್ಕೆ ಕಾರಣವಾದ ಬೆನ್ನಲ್ಲೇ ಕೆಲ ರೈತ ಸಂಘಟನೆಗಳು ಹೋರಾಟದಿಂದ ಹಿಂದೆ ಸರಿಯುವುದಾಗಿ ಹೇಳಿಕೊಂಡಿದೆ. ಈ ರೀತಿಯ ಹೋರಾಟ ನಡೆಸಲು ನಮ್ಮಿಂದ ಸಾಧ್ಯವಿಲ್ಲ ಎಂದು ಸಂಘಟನೆಗಳು ಹೇಳಿವೆ.
ಇದನ್ನೂ ಓದಿ:3 ದಿನಗಳ ಹಿಂದೆ ಆಸ್ಟ್ರೇಲಿಯಾದಿಂದ ಭಾರತಕ್ಕೆ ಬಂದಿದ್ದವ ರೈತ ಹೋರಾಟಕ್ಕೆ ಬಲಿಯಾದ!
ರಾಷ್ಟ್ರೀಯ ಕಿಸಾನ್​ ಮಜ್ದೂರ್​ ಸಂಘಟನೆ​ ಮತ್ತು ಭಾರತೀಯ ಕಿಸಾನ್​ ಯೂನಿಯನ್​ (ಬಿಕೆಯು) ಸಂಘಟನೆಗಳು ಪ್ರತಿಭಟನೆಯಿಂದ ಹಿಂದೆ ಸರಿದಿವೆ. ನಾವು ಹೋರಾಟ ನಡೆಸುತ್ತೇವೆ, ಆದರೆ ಈ ರೀತಿಯಲ್ಲಲ್ಲ ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ​​ ನಾಯಕ ವಿ.ಎಂ.ಸಿಂಗ್ ತಿಳಿಸಿದ್ದಾರೆ. ಯಾರೋ ವಿಭಿನ್ನ ನಿರ್ದೇಶನ ಇರುವ ಹೋರಾಟಗಾರರೂ ಇದರಲ್ಲಿದ್ದಾರೆ. ಅವರೊಂದಿಗೆ ನಾವು ಹೋರಾಡಲು ಸಾಧ್ಯವಿಲ್ಲ. ಎಂಎಸ್​ಪಿ ಗ್ಯಾರಂಟಿ ಸಿಗುವವರೆಗೂ ನಾವು ಹೋರಾಟ ಮಾಡುತ್ತೇವೆ, ಆದರೆ ಈ ರೀತಿಯ ಹೋರಾಟವಲ್ಲ ಎಂದು ಅವರು ತಿಳಿಸಿದ್ದಾರೆ. ಜನರನ್ನು ಸಾಯಿಸಲು ಅಥವಾ ಥಳಿಸಲು ನಾವು ಇಲ್ಲಿಗೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:‘ಕೃಷಿ ಕಾಯ್ದೆಗಳಿಂದ ರೈತರಿಗೆ ಹೆಚ್ಚಿನ ಲಾಭ ಸಿಗಲಿದೆ’ ಐಎಂಎಫ್​ ಅಭಿಮತ
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಘರ್ಷಣೆಗಳಿಂದ ತಮಗೆ ತೀವ್ರ ನೋವಾಗಿದೆ ಎಂದು ಬಿಕೆಯು ಅಧ್ಯಕ್ಷ ಠಾಕೂರ್ ಭಾನು ಪ್ರತಾಪ್ ಸಿಂಗ್ ಹೇಳಿದ್ದಾರೆ. “ನಿನ್ನೆ ದೆಹಲಿಯಲ್ಲಿ ಸಂಭವಿಸಿದ್ದನ್ನು ಕಂಡು ನಮಗೆ ನೋವಾಗಿದೆ. ನಮ್ಮ 58 ದಿನಗಳ ಪ್ರತಿಭಟನೆಯನ್ನು ಕೊನೆಗೊಳಿಸುತ್ತಿದ್ದೇವೆ” ಎಂದು ಅವರು ಹೇಳಿದರು. (ಏಜೆನ್ಸೀಸ್​)
ನಾವಲ್ಲ, ಅಕ್ಕನೇ ತಂಗಿಯನ್ನ ಕೊಂದಿದ್ದು! ಆಮೇಲೆ ನನ್ನನ್ನೂ ಕೊಂದುಬಿಡಿ ಎಂದು ಬೇಡಿಕೊಂಡಳು!

ನೀ ಬಂದ ಮೇಲೆ ಸಾಲ ಹೆಚ್ಚಾಯಿತೆಂದು ಸೊಸೆಯನ್ನು ಹೀಯಾಳಿಸಿದ ಮಾವ; ಕೆಲವೇ ದಿನಗಳಲ್ಲಿ ಹಾದಿಯ ಹೆಣವಾದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 4 =
Remember me
