ಲಖನೌ:ವಕೀಲೆ ಒಬ್ಬರು ಮನೆಯ ಬಳಿ ಹಾಲು ಖರೀದಿಸಿ ವಾಪಸ್​ ಆಗುತ್ತಿದ್ದ ವೇಳೆ ಆಕೆಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮೀರತ್​ ಜಿಲ್ಲೆಯ ನ್ಯೂ ಮೆವ್ಲಾ ಕಾಲೋನಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಅಂಜಲಿ ಗಾರ್ಗ್​(35) ಎಂದು ತಿಳಿದು ಬಂದಿದೆ. ಆಕೆಯ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ಧಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಟಿಪಿ ನಗರ ಪೊಲೀಸ್ ಠಾಣಾಧಿಕಾರಿ ಸಂತ ಶರಣ್ ವೃತ್ತಿಯಲ್ಲಿ ವಕೀಲೆಯಾಗಿ ಕೆಲಸ ಮಾಡುತ್ತಿದ್ದ ಅಂಜಲಿ ಹಾಗೂ ಆಕೆಯ ಪತಿ ನಿತಿನ್ ಗಾರ್ಗ್​ ನಡುವೆ ಪದೇ ಪದೇ ಮನಸ್ತಾಪ ಉಂಟಾಗುತ್ತಿದ್ದ ಕಾರಣ ವಿಚ್ಛೇದನ ಪಡೆಯಲು ನಿರ್ಧರಿಸಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.


UP : मेरठ में दिन निकलते ही कत्ल। दूध लेकर आ रही महिला की घर के गेट पर गोली मारकर हत्या। TP नगर क्षेत्र में बाइक सवार बदमाशों ने वारदात की।इसके अलावा सब ठीक है…. फ़िलहालखबर@sachingupta787pic.twitter.com/DAwMLvRGFz
ಮಹಿಳೆ ಒಂಟಿಯಾಗಿ ಇದ್ದುದ್ದನ್ನು ಗಮನಿಸಿದ ಆರೋಪಿಗಳು ಆಕೆಯ ಚಲನವಲನಗಳ ಮೇಲೆ ನಿಗಾ ಇರಿಸಿದ್ದರು. ಬುಧವಾರ ಬೆಳಗ್ಗೆ ಅಂಜಲಿ ಅವರು ಮಾರುಕಟ್ಟೆಯಿಂದ ಹಾಲನ್ನು ಖರೀದಿಸಿ ವಾಪಸ್​ ಆಗುತ್ತಿದ್ದ ವೇಳೆ ಮನೆಯ ಮುಂಭಾಗ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಮೃತ ಅಂಜಲಿ ಹಾಗೂ ಆಕೆಯ ಪತಿ ನಿತಿನ್​ ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದಾಗ ಅವರ, ಮಾವ ಪದೇ ಪದೇ ಮಹಿಳೆ ಇದ್ದ ಕಡೆ ತೆರಳಿ ಬೆದರಿಕೆ ಹಾಕುತ್ತಿದ್ದರು. ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಸಹ ಮನೆ ಖಾಲಿ ಮಾಡುವಂತೆ ಹೇಳುತ್ತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.


18 मई को डॉ अंजली गर्ग IG#मेरठके ऑफिस पर उनसे मिलने के लिए करीब डेढ़ घंटे तक खड़ी रही. उनको मिलने से मना करके वापिस कर दिया गयामुझसे बातचीत में बताया कि उनके ससुर ने उनका जीना दूभर कर दिया है. पुलिस अफसर उनकी बात नही सुनते.आज अंजली की हत्या हो गईउनका दिया वीडियो, पत्रpic.twitter.com/3SoYKbdpoZ
ಒಮ್ಮೆ ಅಂಜಲಿಯನ್ನು ಹಿಂಬಾಲಿಸಿಕೊಂಡು ಆಕೆಯ ಮಾವ ಬೆದರಿಕೆ ಹಾಕುತ್ತಿರುವ ವಿಡಿಯೋವನ್ನು ವಕೀಲೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದರು. ಈ ಸಂಬಂಧ ಟಿಪಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು. ಮಹಿಳೆ ವಾಸಿಸುತ್ತಿದ್ದ ಮನೆಯ ಮಾಲೀಕತ್ವದ ವಿಚಾರವಾ ಹಾಗೂ ವಿಚ್ಛೇದನದ ವಿವಾರವಾಗಿ ಆಕೆಯ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಪ್ರಕರಣ ಸಂಬಂಧ ಮೃತ ಮಹಿಳೆಯ ಮಾವನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದ್ದು ವಿಚಾರಣೆ ಬಳಿಕ ಘಟನೆಯ ಕುರಿತು ಮಾಹಿತಿಯನ್ನು ನೀಡಲಾಗುವುದು ಎಂದು ಟಿಪಿ ನಗರ ಪೊಲೀಸ್ ಠಾಣಾಧಿಕಾರಿ ಸಂತ ಶರಣ್ ತಿಳಿಸಿದ್ಧಾರೆ.


थाना टीपीनगर के अंतर्गत हुई महिला की हत्या की घटना के सम्बन्ध में पुलिस अधीक्षक नगर द्वारा दी गई बाइट ।#MeerutPolice#UPPolicepic.twitter.com/HSSHWdP1EW
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fourteen =
Remember me
