ನವದೆಹಲಿ:ಕೇಂದ್ರ ಬಜೆಟ್​ ಮಂಡನೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬಜೆಟ್​ ಮಂಡನೆಗೆ ಔಪಚಾರಿಕ ಒಪ್ಪಿಗೆ ಪಡೆದರು.
ರಾಷ್ಟ್ರಪತಿ ಭೇಟಿಯ ವೇಳೆ ಹಣಕಾಸು ರಾಜ್ಯ ಸಚಿವರುಗಳಾದ ಡಾ. ಭಾಗವತ್​ ಕೃಷ್ಣರಾವ್​ ಕಾರದ್​ ಮತ್ತು ಪಂಕಜ್​ ಚೌಧರಿ ಹಾಗೂ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಅವರಿಗೆ ಸಾಥ್​ ನೀಡಿದರು.
Union Minister of Finance and Corporate Affairs Nirmala Sitharaman, MoS Dr Bhagwat Kishanrao Karad, MoS Pankaj Chaudhary and senior officials of the Ministry of Finance called on President Droupadi Murmu at Rashtrapati Bhavan before presenting the Union Budget 2023-24.pic.twitter.com/S9GJiDG1aw
— ANI (@ANI)February 1, 2023

ರಾಷ್ಟ್ರಪತಿಗಳ ಒಪ್ಪಿಗೆ ಬಳಿಕ ಸಂಸತ್ತಿನ ಕಡೆ ತೆರಳಲಿರುವ ನಿರ್ಮಲಾ ಸೀತಾರಾಮನ್​ ಬಜೆಟ್​ ಮಂಡನೆಗೂ ಮುನ್ನ ಸಂಪುಟ ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆಯಲಿದ್ದಾರೆ. ಇದಾದ ನಂತರ ಬೆಳಗ್ಗೆ 11 ಗಂಟೆಗೆ ಬಜೆಟ್​ ಮಂಡನೆ ಆರಂಭಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 10ನೇ ಪೂರ್ಣ ಪ್ರಮಾಣದ ಬಜೆಟ್​ ಇದಾಗಿದ್ದು, ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್​ ಅವರು ಮಂಡಿಸುತ್ತಿರುವ 5ನೇ ಬಜೆಟ್​ ಆಗಿದೆ. ಈ ಬಾರಿಯು ಸೂಟ್​ಕೇಸ್ ಸಂಪ್ರದಾಯವಿಲ್ಲ ಮತ್ತು ಮುದ್ರಣದ ಪ್ರತಿಗಳು ಇರುವುದಿಲ್ಲ. ಕಳೆದ ಬಾರಿಯಂತೆ ಇ ಬಜೆಟ್ ಮಂಡನೆಯಾಗಲಿದೆ. ​​ ಕಳೆದ ಬಾರಿಯಂತೆ “ಬಹಿ ಖಾತಾ” ಸಂಪ್ರದಾಯವನ್ನು ಬದಿಗಿಟ್ಟು ಟ್ಯಾಬ್​ ಮೂಲಕ ಆಯವ್ಯಯ ಮಂಡನೆ ಮಾಡಲಿದ್ದಾರೆ.
ಸದ್ಯ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ನಡುವೆ ಮಂಡನೆ ಆಗುತ್ತಿರುವ ಈ ಬಜೆಟ್​ ವಿಶ್ವದ ಗಮನ ಸೆಳೆದಿದೆ. ಹೀಗಾಗಿ ಜನರು ಕೂಡ ಬಜೆಟ್​ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, 1000 ರೂ. ದಾಟಿರುವ ಸಿಲಿಂಡರ್​ ಬೆಲೆ ಇಳಿಕೆ ಆಗಲಿದೆಯಾ? ಶತಕ ಬಾರಿಸಿರುವ ಪೆಟ್ರೋಲ್​ ದರದಲ್ಲಿ ಕೊಂಚ ನಿರಾಳ ಕಾಣಬಹುದಾ? ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆ ಕಡಿಮೆ ಆಗಲಿದೆಯಾ? ಬೀಜ ಗೊಬ್ಬರ ಖರೀದಿಯಲ್ಲಿ ಸಬ್ಸಿಡಿ ಸಿಗುತ್ತಾ? ಈ ಬಾರಿ ಆದಾಯ ತೆರಿಗೆ ಮಿತಿಯನ್ನು ಸರ್ಕಾರ ಹೆಚ್ಚಿಸುತ್ತಾ? ಯಾವುದು ಇಳಿಕೆ ಯಾವುದು ಏರಿಕೆ? ಜನರಿಗೆ ಪ್ರಧಾನಿ ಮೋದಿ ಕೊಡ್ತಾರಾ ಗುಡ್ ನ್ಯೂಸ್? ಎಂಬಿತ್ಯಾದಿ ಪ್ರಶ್ನೆಗಳಿಗೆ ಇಂದಿನ ಬಜೆಟ್​ನಲ್ಲಿ ಉತ್ತರ ಸಿಗಲಿದೆ.(ಏಜೆನ್ಸೀಸ್​)
ಇಂದಿನ ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಇಡೀ ವಿಶ್ವವೇ ಭಾರತದ ಬಜೆಟ್​ ಎದುರು ನೋಡುತ್ತಿದೆ: ಪ್ರಧಾನಿ ಮೋದಿ

ದೇಶದಲ್ಲಿ ಸ್ಥಿರ, ನಿರ್ಭೀತ, ನಿರ್ಣಾಯಕ ಸರ್ಕಾರವಿದ್ದು, ದೊಡ್ಡ ಕನಸುಗಳನ್ನು ನನಸಾಗಿಸುವತ್ತ ಕೆಲ್ಸ ಮಾಡ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eleven =
Remember me
