ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ನೀತಿ ಆಯೋಗದ ಒಂಬತ್ತನೇ ಆಡಳಿತ ಮಂಡಳಿ ಸಭೆಯಿಂದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮಧ್ಯದಲ್ಲೇ ಹೊರಬಂದು ತಮಗೆ ಅವಮಾನ ಮಾಡಲಾಗಿದೆ. 5 ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಿ, ಬಳಿಕ ಮಾತನಾಡುತ್ತಿದ್ದರು ಮೈಕ್​ ಸ್ವಿಚ್​ ಆಫ್​​ ಮಾಡಲಾಯಿತು ಎಂದು ಆರೋಪಿಸಿದ್ದರು. ಮಮತಾ ಬ್ಯಾನರ್ಜಿ ಅವರ ಈ ಆರೋಪವನ್ನು ಕೇಂದ್ರಸರ್ಕಾರ ತಳ್ಳಿ ಹಾಕಿದೆ.
ಇದನ್ನು ಓದಿ:ನೀತಿ ಆಯೋಗ ಸಭೆಯಿಂದ ಹೊರನಡೆದ ಸಿಎಂ; ಪ.ಬಂಗಾಳಕ್ಕೆ ಮಾಡಿದ ಅವಮಾನ ಎಂದಿದ್ದೇಕೆ ಮಮತಾ ಬ್ಯಾನರ್ಜಿ?
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​, ಮಮತಾ ಬ್ಯಾನರ್ಜಿ ಅವರು ಮೈಕ್ ಸ್ವಿಚ್ ಆಫ್ ಆಗಿದೆ ಎಂದು ಹೇಳುವುದು ಸರಿಯಲ್ಲ. ಅವರಿಗೆ ಮಾತನಾಡಲು ನೀಡಿದ್ದ ಸಮಯ ಮುಗಿದಿತ್ತು ಎಂದು ಹೇಳಿದ್ದಾರೆ.
ಸಭೆಯಲ್ಲಿ ಪ್ರತಿ ಸಿಎಂಗೂ ಸಮಯ ನಿಗದಿ ಮಾಡಲಾಗಿತ್ತು. ಪ್ರತಿ ಟೇಬಲ್ ಮುಂದೆ ಇರುವ ಪರದೆಯ ಮೇಲೆ ಇದನ್ನು ತೋರಿಸಲಾಗಿದೆ. ಮಮತಾ ಬ್ಯಾನರ್ಜಿ ಅವರ ಮಾತುಗಳನ್ನು ಎಚ್ಚರಿಕೆಯಿಂದ ಆಲಿಸಲಾಯಿತು. ಆದರೆ ಅವರು ಮೈಕ್ ಸ್ವಿಚ್ ಆಫ್ ಆಗಿದೆ ಎಂದು ಹೇಳಿದ್ದಾರೆ. ಇದು ಸಂಪೂರ್ಣ ಸುಳ್ಳು. ಪ್ರತಿಯೊಬ್ಬ ಸಿಎಂಗೂ ಮಾತನಾಡಲು ಸೂಕ್ತ ಸಮಯ ನೀಡಲಾಗಿದೆ. ತಮ್ಮ ಮೈಕ್ ಸ್ವಿಚ್ ಆಫ್ ಆಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿರುವುದು ದುರದೃಷ್ಟಕರ, ಇದು ನಿಜವಲ್ಲ. ಸುಳ್ಳನ್ನು ಆಧರಿಸಿ ಕಥೆಯನ್ನು ರಚಿಸುವ ಬದಲು, ಅದರ ಹಿಂದಿನ ಸತ್ಯವನ್ನು ಅವರು ಹೇಳಬೇಕು ಎಂದು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು.
#WATCH| On West Bengal CM Mamata Banerjee's allegations, Union Finance Minister Nirmala Sitharaman says, "CM Mamata Banerjee attended the Niti Aayog meeting. We all heard her. Every CM was given the allotted time and that was displayed on the screen which was present before…pic.twitter.com/IxnO4NXj8l
ಇದೇ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿ ಸಭೆಯಲ್ಲಿ ಏನಾಯಿತು ಎಂದು ನೋಡಿಲ್ಲ ಎಂದು ಹೇಳಿದರು.(ಏಜೆನ್ಸೀಸ್​​)
ಭ್ರಷ್ಟರ ದೊರೆ ಎಂದ ಅಮಿತ್​​ ಷಾ ಹೇಳಿಕೆಗೆ ಶರದ್​​ ಪವಾರ್​​ ಕೊಟ್ಟ ಉತ್ತರ ಹೀಗಿದೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 9 =
Remember me
