ಕಾನ್ಪುರ:ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಶತಾಯುಷಿ ಒಬ್ಬರು ಜಾಗದ ಮಾಲೀಕರಿಗೆ 10 ಲಕ್ಷ ರೂಪಾಯಿ ಬೇಡಿಕೆ ಇಟ್ಟು ಪೊಲೀಸರ ಅತಿಥಿಯಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಚಂದ್ರಕಾಳಿ ದೇವಿ(100)ವರ್ಷದ ಮಹಿಳೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆಯುಕ್ತರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ದೂರುದಾರರಾದ ಮಾಧುರಿ ಎಂಬುವವರ ಹೆಸರಿನಲ್ಲಿ ಕಾನ್ಪುರದಲ್ಲಿ ಜಾಗ ಒಂದನ್ನು ಖರೀದಿಸಲಾಗಿತ್ತು. ಈ ವೇಳೆ ಚಂದ್ರಕಾಳಿ, ಆಕೆಯ ಮಕ್ಕಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಾಗ ತಮ್ಮ ಹೆಸರಿನಲ್ಲಿರುವ ಕಾರಣ ಇಲ್ಲಿ ಯಾವುದೇ ರೀತಿಯ ಕಾಮಗಾರಿಗಳನ್ನು ನಡೆಸದಂತೆ ಮಾಲೀಕರಿಗೆ ಹೇಳಿದ್ದಾರೆ.
ಒಂದು ವೇಳೆ ಜಾಗದಲ್ಲಿ ಕಟ್ಟಡ ನಿರ್ಮಾಣವನ್ನು ಶುರು ಮಾಡಬೇಕಾದರೆ ತಮಗೆ 10 ಲಕ್ಷ ರೂಪಾಯಿ ನೀಡಬೇಕು ಕೊಡದಿದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಜೀವ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.
ಮೇ 6ರಂದು ಜಾಗಕ್ಕೆ ಸಂಬಂಧಿಸಿದಂತೆ ಕೆಲಸ ಶುರು ಮಾಡಲು ಮುಂದಾದಾಗ ಮಹಿಳೆ ಹಾಗೂ ಆಕೆಯ ಪತಿ ಮೇಲೆ ಚಂದ್ರಕಾಳಿ 10-12 ಜನರನ್ನು ಬಿಟ್ಟು ಹಲ್ಲೆ ಮಾಡಿಸಿದ್ಧಾರೆ. ಕಳೆದ ಹಲವು ವರ್ಷಗಳಿಂದ ಇವರು ಮಿರ್ಜಾಪುರ ನಯಿ ಬಸ್ತಿಯಲ್ಲಿ ವಾಸಿಸುತ್ತಿದ್ದು ಸುತ್ತ ಮುತ್ತಲಿನಲ್ಲಿ ಯಾರಾದರೂ ಜಾಗ ಖರೀದಿಸಿದರೆ ಅವರಿಗೆ 5-10 ಲಕ್ಷ ರೂಪಾಯಿ ನೀಡಬೇಕು ಇಲ್ಲವಾದ್ದಲ್ಲಿ ಅವರನ್ನು ಬೆದರಿಸಿ ಹಲ್ಲೆ ಮಾಡುತ್ತಾರೆ ಎಂದು ದೂರಿದ್ದಾರೆ.
ದೂರಿನ ಹಿನ್ನಲೆಯಲ್ಲಿ ಚಂದ್ರಿಕಾ ದೇವಿ ಹಾಗೂ ಕುಟುಂಬಸ್ಥರು ಪೊಲೀಸ್​ ಆಯುಕ್ತರ ಕಚೇರಿಯಲ್ಲಿ ನಡೆದ ವಿಚಾರಣೆಯಲ್ಲಿ ಭಾಗಿಯಾದರೂ ಮತ್ತು ತನಿಖೆಗೆ ಸಹಕರಿಸುವುದಾಗಿ ಹೇಳಿಕೆ ನೀಡುರುವುದಾಗಿ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + ten =
Remember me
