ಹೈದರಾಬಾದ್​:ಪೂರ್ವಜರು ಕಟ್ಟಿಸಿದ್ದ ಹಳೇ ಮನೆಯ ಮಣ್ಣಿನ ಚಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ತೆಲಂಗಾಣದ ವಾನಪರ್ತೆ ಜಿಲ್ಲೆಯಲ್ಲಿ ನಡೆದಿದೆ. ದುರಂತವೆಂದರೆ ಸಾವಿಗೂ ಮುನ್ನ ಐವರು ಸಹ ಕುಟುಂಬದ ಸದಸ್ಯರೊಬ್ಬರ ತಿಥಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಗೋಪಾಲ್​ಪೇಟೆ ಮಂಡಲದ ಬುದ್ದರಾಮ್ ಗ್ರಾಮದಲ್ಲಿ ಇಂದು (ಅ.25) ಬೆಳ್ಳಂಬೆಳಗ್ಗೆ ದುರ್ಘಟನೆ ಸಂಭವಿಸಿದೆ. ನಾಲ್ವರು ಗಂಡು ಮಕ್ಕಳು ತಮ್ಮ ಪತ್ನಿ ಹಾಗೂ ಮಕ್ಕಳ ಜತೆ ಸೇರಿ ತಂದೆಯ ವರ್ಷದ ತಿಥಿ ಕಾರ್ಯ ನೆರವೇರಿಸುತ್ತಿದ್ದರು. ಈ ಕಾರ್ಯಕ್ರಮ ತಮ್ಮ ಪೂರ್ವಜರ ಮನೆಯಲ್ಲಿ ನಡೆಯುತ್ತಿತ್ತು. ಶನಿವಾರವೇ ಎಲ್ಲ ಕಾರ್ಯವನ್ನು ಮುಗಿಸಿ ರಾತ್ರಿ ಸವಿ ನಿದ್ದೆಗೆ ಜಾರಿದ್ದರು.
ಇದನ್ನೂ ಓದಿ:Video| ಆಕೆ ಥೂ ಎಂದಳು, ಆತ ನೂಕಿದ..; ಆಮೇಲೇನಾಯಿತು ನೀವೇ ನೋಡಿ…
ಭಾನುವಾರ ಬೆಳ್ಳಂಬೆಳಗ್ಗೆಯೇ ಮಲಗಿದ್ದವರ ಮೇಲೆ ಮಣ್ಣಿನ ಚಾವಣಿ ಕುಸಿದಿದೆ. ಪರಿಣಾಮ ಐವರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತರನ್ನು ಚೆವ್ವ ಮನೆಮ್ಮ (68), ಸುಪ್ರಜಾ (38), ವೈಷ್ಣವಿ (21), ರಿಂಕಿ (18) ಮತ್ತು ಉಮಾದೇವಿ (38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಮೃತರ ಕುಟುಂಬಕ್ಕೆ ತೆಲಂಗಾಣ ಕೃಷಿ ಸಚಿವ ಹಾಗೂ ವಾನಪರ್ತೆ ಜಿಲ್ಲೆಯವರಾದ ಎಸ್​. ನಿರಂಜನ್​ ರೆಡ್ಡಿ ಸಾಂತ್ವಾನ ಹೇಳಿದ್ದಾರೆ.
ಕಳೆದ ಒಂದು ತಿಂಗಳಿಂದ ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾಕಷ್ಟು ಆಸ್ತಿ-ಪಾಸ್ತಿ, ಪ್ರಾಣ ಹಾನಿ ಸಂಭವಿಸಿದೆ. ಕಟ್ಟಡ ಕುಸಿತದಂತಹ ಅನೇಕ ದುರ್ಘಟನೆಗಳು ನಡೆದಿವೆ. ಹೈದರಾಬಾದಿನ ಅನೇಕ ಏರಿಯಾಗಳು ಈಗಲೂ ಜಲಾವೃತಗೊಂಡಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ನಾಗರಿಕರು ಪ್ರವಾಹದಿಂದ ಸಂಕಷ್ಟ ಅನುಭವಿಸಿದ್ದಾರೆ.(ಏಜೆನ್ಸೀಸ್​)
ಪಕ್ಕದ್ಮನೆ ಹುಡುಗಿಯನ್ನು ಟೆರೇಸ್​ನಿಂದ ತಳ್ಳಿದ್ರು; ಯುವತಿಗೆ ಗಂಭೀರ ಗಾಯ, ಮೂವರ ಬಂಧನ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + nineteen =
Remember me
