ನವದೆಹಲಿ:ಪ್ರವಾಹ ಮುಂತಾದ ಪ್ರಾಕೃತಿಕ ವಿಪತ್ತುಗಳು ಸಂಬಂಧಿಕರನ್ನು ಬೇರೆ ಮಾಡಿದ್ದಕ್ಕೆ ಹಲವಾರು ಉದಾಹರಣೆಗಳಿವೆ. ಆದರೆ ಪ್ರವಾಹದ ಕಾರಣಕ್ಕೆ ವರ್ಷಗಳ ಬಳಿಕ ತಾಯಿ-ಮಗ ಒಗ್ಗೂಡಿದ ಅತ್ಯಪರೂಪದ ಪ್ರಕರಣವೊಂದು ಇಲ್ಲಿದೆ.
ತಾಯಿ ಹಾಗೂ ಮಗ 35 ವರ್ಷಗಳ ಬಳಿಕ ಮತ್ತೆ ಪರಸ್ಪರ ನೋಡುವಂತಾಗಲು ಪ್ರವಾಹವೇ ಪ್ರಮುಖವಾಗಿ ಕಾರಣವಾಗಿದೆ. ಪಂಜಾಬ್​ನ ಪಟಿಯಾಲಾದಲ್ಲಿ ಈ ಪ್ರಕರಣ ನಡೆದಿದೆ. ಜಗಜಿತ್ ಸಿಂಗ್ ಎಂಬ 37 ವರ್ಷದ ವ್ಯಕ್ತಿ 35 ವರ್ಷಗಳ ಬಳಿಕ ತಾಯಿಯನ್ನು ನೋಡುವಂತಾಗಿದೆ.
ಜಗಜಿತ್ ಸಿಂಗ್​​ಗೆ 2 ವರ್ಷವಿದ್ದಾಗ ತಂದೆ ತೀರಿಹೋಗಿದ್ದು, ತಾಯಿ ಎರಡನೇ ಮದುವೆಯಾಗಿದ್ದರು. ಆ ಬಳಿಕ ಜಗಜಿತ್ ಸಿಂಗ್ ಅಜ್ಜ-ಅಜ್ಜಿ ಆತನನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ಬೆಳೆಸಿದ್ದರು. ಅಲ್ಲದೆ ಜಗಜಿತ್ ತಂದೆ-ತಾಯಿ ಅಪಘಾತದಲ್ಲಿ ತೀರಿಹೋಗಿದ್ದರು ಎಂದು ಸುಳ್ಳು ಹೇಳಿದ್ದರು.
ಇದನ್ನೂ ಓದಿ:ಹೆಂಡತಿಗೆ ಹೆದರಿ ಮನೆ ಬಿಟ್ಟು ಒಂದೂವರೆ ವರ್ಷ ನಾಪತ್ತೆಯಾಗಿದ್ದ ಗಂಡ!
ಆದರೆ ಇತ್ತೀಚೆಗೆ ಪಂಜಾಬ್​ನ ಪಟಿಯಾಲದ ಪ್ರವಾಹಪೀಡಿತ ಪ್ರದೇಶಕ್ಕೆ ರಕ್ಷಣಾ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಜಗಜಿತ್ ಆಗಮಿಸಿದ್ದ. ಪಟಿಯಾಲದ ಬೊಹರ್​ಪುರ ಗ್ರಾಮದಲ್ಲಿ ತಾಯಿಯ ತಂದೆ-ತಾಯಿ ಇದ್ದರು ಎಂದು ಸಂಬಂಧಿಕರೊಬ್ಬರು ಹೇಳುತ್ತಿದ್ದುದನ್ನು ನೆನಪಿಸಿಕೊಂಡ ಜಗಜಿತ್ ಆ ಗ್ರಾಮವನ್ನು ಅರಸಿಕೊಂಡು ಹೋಗಿ ವಿಚಾರಿಸಿದ್ದ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಬಳಿಕ ತಾನು ಹುಡುಕುತ್ತಿದ್ದ ಮನೆಯ ವಿಳಾಸ ಸಿಕ್ಕಾಗ ಅಲ್ಲಿ ಮಂಚದ ಮೇಲೆ ಮಲಗಿದ್ದ ವೃದ್ಧೆಯೊಬ್ಬಳ ಬಳಿ ವಿಚಾರಿಸಿದಾಗ ಆಕೆಯೇ ತನ್ನ ತಾಯಿಯ ತಾಯಿ ಎಂಬುದು ಗೊತ್ತಾಗಿದೆ. ತನ್ನ ತಾಯಿಯ ತಂದೆ-ತಾಯಿ ಜೀವಂತ ಇದ್ದರು, ಆದರೆ ವೈಮನಸ್ಯದ ಕಾರಣಕ್ಕೆ ನಾವು ಮಾತಾಡುತ್ತಿಲ್ಲ ಎಂದು ಅಜ್ಜ-ಅಜ್ಜಿ ಹೇಳುತ್ತಿದ್ದುದನ್ನು ಜಗಜಿತ್ ಹೇಳಿಕೊಂಡಿದ್ದ.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ತನ್ನ ತಾಯಿಯ ಹೆತ್ತವರ ಕುರಿತು ತಿಳಿದಿದ್ದ ಎಲ್ಲರೂ 2014ರ ಬಳಿಕ ಯಾರೂ ಜೀವಂತ ಇರದ ಕಾರಣ ಹೆಚ್ಚಿನ ವಿಷಯ ಗೊತ್ತಾಗಲಿಲ್ಲ. ಆದರೆ ಸಂಬಂಧಿಯೊಬ್ಬರು ಬೊಹರ್​ಪುರ ಎಂಬ ಗ್ರಾಮದ ಕುರಿತು ಹೇಳುತ್ತಿದ್ದುದು ನೆನಪಿದ್ದರಿಂದ ಹುಡುಕಿಕೊಂಡು ಬಂದೆ ಎಂದ ಜಗಜಿತ್​​ಗೆ ಕೊನೆಗೂ 35 ವರ್ಷಗಳ ಬಳಿಕ ತಾಯಿಯ ದರ್ಶನವಾಗಿದೆ. ಜಗಜಿತ್ ತನ್ನ ಈ ಭಾವುಕ ಕ್ಷಣಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ.
ಎಲ್ಲರೂ ಬೇಲಿ ಹಾರುತ್ತಿದ್ದಾರೆ ಎಂದ ಖುಷ್​​ಬೂ; ಉಡುಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಹೀಗಂದಿದ್ದೇಕೆ?

‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
