ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರು ಸೋಮವಾರ ರಾತ್ರಿ ಹಿಂಸಾಚಾರಕ್ಕೆ ಇಳಿದ ಪರಿಣಾಮ, ಒಬ್ಬ ಪೊಲೀಸ್ ಪೇದೆ ಸೇರಿ ನಾಲ್ವರು ರಾತ್ರಿಯೇ ಮೃತಪಟ್ಟಿದ್ದರು. ಮಂಗವಾರ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಕಾನೂನು ಸುವ್ಯವಸ್ಥೆ ಮತ್ತು ಶಾಂತಿಪಾಲನೆ ಕಾಪಾಡಲು ಭದ್ರತಾ ಪಡೆ ಕಾರ್ಯನಿರ್ವಹಿಸುತ್ತಿದೆ. ಈ ನಡುವೆ, ಮಂಗಳವಾರ ಬೆಳಗ್ಗೆಯೂ ಜನರ ಗುಂಪು ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸಿದ್ದು, ಕಲ್ಲು ತೂರಾಟ ಕೂಡಾ ಮಾಡಿದೆ. ಈ ದುಂಡಾವರ್ತನೆ ದೆಹಲಿಯ ಮೌಜ್​ಪುರ, ಬ್ರಹ್ಮಪುರಿ ಪ್ರದೇಶದಲ್ಲಿ ನಡೆದಿದೆ.
ಸೋಮವಾರದ ಹಿಂಸಾಚಾರದಲ್ಲಿ ಗಾಯಗೊಂಡವರ ಸಂಖ್ಯೆಯೂ ಹೆಚ್ಚಾಗಿದ್ದು, 65ಕ್ಕೆ ಏರಿಕೆಯಾಗಿದೆ. 45 ಬೆಂಕಿ ಹಚ್ಚಿದ ಪ್ರಕರಣಗಳನ್ನು ಅಗ್ನಿಶಾಮಕ ಸೇವೆ ದಾಖಲಿಸಿಕೊಂಡಿದೆ. ಒಂದು ಅಗ್ನಿಶಾಮಕ ವಾಹನದ ಮೇಲೂ ಪ್ರತಿಭಟನಾಕಾರರು ಕಲ್ಲೆಸೆದ ಪ್ರಕರಣವೂ ದಾಖಲಾಗಿದೆ. ಪರಿಣಾಮ ಐವರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + nine =
Remember me
