ನವದೆಹಲಿ:ಕರೊನಾ ವೈರಸ್ ಭಾರತದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳೆದ ಗುರುವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಮಾ.22ರಂದು ಒಂದು ದಿನದ ಜನತಾ ಕರ್ಫ್ಯೂಗೆ ಕರೆ ನೀಡಿದ್ದರು. ಅದಕ್ಕೆ ದೇಶದ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಆದರೆ ಕರೊನಾ ವೈರಸ್​ ಬಗ್ಗೆ ಜನರಿನ್ನೂ ಎಚ್ಚೆತ್ತುಕೊಳ್ಳುತ್ತಿಲ್ಲ. ಲಾಕ್​ಡೌನ್​, ಸೆಕ್ಷನ್​ 144 ಜಾರಿಯಲ್ಲಿದ್ದರೂ ಜನರು ಬೀದಿಗಿಳಿಯುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತ್ತೆ ಕರೊನಾ ವೈರಸ್​ ನಿಯಂತ್ರಣ, ಮುಂಜಾಗ್ರತೆ ಬಗ್ಗೆ ದೇಶವನ್ನು ಉದ್ದೇಶಿಸಿ ಮಾತನಾಡಿದರು.
ಮಾ.22ರಂದು ಜನತಾ ಕರ್ಫ್ಯೂವನ್ನು ಇಡೀ ದೇಶದ ಜನರು ಒಗ್ಗಟ್ಟಾಗಿ ನಡೆಸಿದ್ದಾರೆ. ಈ ಮೂಲಕ ಯಾವುದೇ ಸಂಕಷ್ಟ ಬಂದರೂ ಒಗ್ಗಟ್ಟಾಗಿ ಇರುತ್ತೇವೆ ಎಂಬುದನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ಹಾಗೇ ಇಂದು ರಾತ್ರಿ 12 ಗಂಟೆಯಿಂದ ಇಡೀ ಭಾರತ ಲಾಕ್​ಡೌನ್​ ಆಗಲಿದೆ ಎಂದು ನರೇಂದ್ರ ಮೋದಿ ಘೋಷಿಸಿದರು. ಪ್ರತಿ ರಾಜ್ಯ, ಹಳ್ಳಿ, ಜಿಲ್ಲೆಗಳು ಲಾಕ್​ಡೌನ್​ ಆಗಲಿದೆ. ಇದೂ ಕೂಡ ಕರ್ಫ್ಯೂದಂತೆಯೇ ಆಗಿದೆ. ಕರೊನಾದಿಂದ ಭಾರತವನ್ನು, ಭಾರತದ ಜನರನ್ನು ಕಾಪಾಡಲು ಸಂಪೂರ್ಣ ಲಾಕ್​ಡೌನ್​ ಒಂದೇ ಪರಿಹಾರ ಎಂದು ನರೇಂದ್ರ ಮೋದಿ ತಿಳಿಸಿದ್ದಾರೆ.
21 ದಿನಗಳ ಕಾಲ ಈ ಲಾಕ್​ಡೌನ್​ ಇರಲಿದೆ. ಅಷ್ಟಾಗಿ ಕೂಡ ಕರೊನಾ ನಿಯಂತ್ರಣಕ್ಕೆ ಬಾರದೆ ಇದ್ದರೆ ಲಾಕ್​ಡೌನ್​ ಮುಂದುವರಿಯಲಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + four =
Remember me
