ವಾರಂಗಲ್:ಕುಡಿದು ವಾಹನ ಚಲಾಯಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ವೇಳೆ ಕುಡುಕನೊಬ್ಬ ಬೈಕ್‌ಗೆ ಬೆಂಕಿ ಹಚ್ಚಿದ ಘಟನೆ ತೆಲಂಗಾಣದ ವಾರಂಗಲ್​ ಬಳಿ ನಡೆದಿದೆ.ಇದನ್ನೂ ಓದಿ:ಮಗಳ ಕೂದಲು ಹಿಡಿದು ಎಳೆದಾಡಿ ಚಾಕುವಿನಿಂದ 15 ಬಾರಿ ಇರಿದ ತಂದೆ..
ವಾರಂಗಲ್ ಪ್ರಧಾನ ಅಂಚೆ ಕಚೇರಿ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಶನಿವಾರ ಸಂಜೆ ಡ್ರಂಕ್ ಅಂಡ್ ಡ್ರೈವ್ ಟೆಸ್ಟ್​​ ಮಾಡುತ್ತಿದ್ದರು. ಈ ವೇಳೆ ಶಿವನಗರ ಬಡಾವಣೆಯ ಪುಲಿಸೇರು ಶಿವ ಎಂಬ ವ್ಯಕ್ತಿ ಮದ್ಯ ಸೇವಿಸಿ ಬಂದಿದ್ದು, ಅಧಿಕಾರಿಗಳನ್ನು ಕಂಡು ತನ್ನ ಬೈಕ್​ನಿಂದ ರಸ್ತೆ ದಾಟಲು ಯತ್ನಿಸಿದ್ದಾನೆ. ಆಗ ಪೊಲೀಸರು ಆತನನ್ನು ಹಿಡಿದು ತಪಾಸಣೆ ನಡೆಸಿದ್ದಾರೆ.ಇದರಿಂದ ಕೋಪಗೊಂಡ ಶಿವ ತನ್ನ ವಾಹನದಲ್ಲಿದ್ದ ಪೆಟ್ರೋಲ್ ಪೈಪ್ ತೆಗೆದು ಬೈಕ್​ಗೆ ಬೆಂಕಿ ಹಚ್ಚಿದ್ದಾನೆ. ತಕ್ಷಣವೇ ಪೊಲೀಸರು ಪಕ್ಕದ ಅಂಗಡಿಯಿಂದ ವಾಟರ್ ಕ್ಯಾನ್​ಗಳಲ್ಲಿ ನೀರು ತಂದು ಬೆಂಕಿ ನಂದಿಸಿದ್ದಾರೆ. ಬಳಿಕ ವಾಹನವನ್ನು ವಶಪಡಿಸಿಕೊಂಡು ಅಲ್ಲಿಂದ ಕೆಲವರು ಹೋಗಿದ್ದಾರೆ. ಪೊಲೀಸರು ತನ್ನ ವಾಹನವನ್ನು ತೆಗೆದುಕೊಂಡು ಹೋಗಿದ್ದಕ್ಕೆ ಮತ್ತಷ್ಟು ಕೆರಳಿದ ಆತ ವಾಹನ ಚಲಾಯಿಸಿ ಸಿಕ್ಕಿಬೀಳದ ಕಾರಣ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದು, ಪೊಲೀಸರು ಆತನನ್ನು ಠಾಣೆಗೆ ಕರೆದೊಯ್ದಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + thirteen =
Remember me
