ಉತ್ತರಪ್ರದೇಶ:ಉತ್ತರಪ್ರದೇಶದ ಫೈರ್​ ಬ್ರ್ಯಾಂಡ್​ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಮಾಫಿಯಾ ಮತ್ತು ದರೋಡೆಕೋರರ ವಿರುದ್ಧ ಬೃಹತ್ ದಮನವನ್ನು ನಾವು ಆರಂಭಿಸಿದ್ದು ಸುಲಿಗೆ ಬೆದರಿಕೆಗಳೊಂದಿಗೆ ಜನರನ್ನು ಭಯಭೀತಗೊಳಿಸುತ್ತಿದ್ದವರು ಈಗ ನ್ಯಾಯಾಲಯದ ಶಿಕ್ಷೆಗೆ ಹೆದರಿ ನಂತರ ತಮ್ಮ ಪ್ಯಾಂಟ್ ಅನ್ನು ಒದ್ದೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು. ಗ್ಯಾಂಗ್​ಸ್ಟರ್​-ರಾಜಕಾರಣಿ ಅತೀಕ್ ಬಂಧನವಾದ ಕೆಲವೇ ದಿನಗಳಲ್ಲಿ ಈ ಹೇಳಿಕೆ ಬಂದಿದೆ.
ಇದನ್ನೂ ಓದಿ:ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ಗೆ ಪ್ರಾಣ ಬೆದರಿಕೆ ಒಡ್ಡಿದ 16ರ ಪೋರ!
ಯೋಗಿ ಆದಿತ್ಯನಾಥ್​ “ಮೊದಲು ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಸ್ವಲ್ಪವೂ ಗೌರವ ತೋರಿಸದ ಜನರು ಈಗ ತಮ್ಮ ಪ್ರಾಣಕ್ಕಾಗಿ ಭಯಪಟ್ಟುಕೊಂಡು ಓಡುತ್ತಿರುವುದನ್ನು ಜನರು ನೋಡುತ್ತಿದ್ದಾರೆ” ಎಂದು ಬಾಟ್ಲಿಂಗ್ ಪ್ಲಾಂಟ್‌ನ ಭೂಮಿ ಪೂಜೆಯ ನಂತರ ಸಭೆಯನ್ನುದ್ದೇಶಿಸಿ ಅವರು ಈ ಹೇಳಿಕೆಯನ್ನು ನೀಡಿದರು.
“ಇಂದು ರಾಜ್ಯದಲ್ಲಿ ಹೂಡಿಕೆದಾರರ ಭದ್ರತೆ ಮತ್ತು ಅವರ ಬಂಡವಾಳ ಖಾತರಿಯಾಗಿದೆ. ಉತ್ತರಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮೀರಿ ಹೋಗಲು ಯಾರಿಗೂ ಅವಕಾಶವಿಲ್ಲ. ಬಲವಾದ ಕಾನೂನು-ಸುವ್ಯವಸ್ಥೆ ಪರಿಸ್ಥಿತಿಯೊಂದಿಗೆ, ಜನ ಜೀವನಕ್ಕೆ ಶತ್ರುಗಳಾಗಿರುವ ಮಾಫಿಯಾ ಈಗ ಭಯದಲ್ಲಿದೆ. ಅವರ ಜೀವನದ ಬಗ್ಗೆ, ಜನರನ್ನು ಭಯಭೀತಗೊಳಿಸುವವರ ವಿರುದ್ಧ ನ್ಯಾಯಾಲಯಗಳು ತೀರ್ಪು ನೀಡಿದಾಗ, ಅವರು ತುಂಬಾ ಭಯಭೀತರಾಗುತ್ತಾರೆ – ‘ಉಂಕಿ ಪ್ಯಾಂಟ್​ ಗೀಲಿ ಹೋ ಜಾ ರಹೀ ಹೈ (ಅವರು ತಮ್ಮ ಪ್ಯಾಂಟ್ ಒದ್ದೆ ಮಾಡುತ್ತಾರೆ)” ಅವರು ಹೇಳಿದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − six =
Remember me
