ಮಧ್ಯಪ್ರದೇಶ:ಕೆಲವು ದಿನಗಳ ಹಿಂದೆ ಟೊಮ್ಯಾಟೋ, ಇರುಳ್ಳಿ ಬೆಲೆ ಏರಿಕೆಯಾಗಿತ್ತು. ಇದೀಗ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆ ಬೆನ್ನಲ್ಲೇ ರೈತರಿಗೆ ಬೆಳ್ಳುಳ್ಳಿ ಬೆಲೆ ರಕ್ಷಣೆ ಮಾಡಿಕೊಳ್ಳುವುದು ಒಂದು ಸವಾಲಾಗಿದೆ. ಹೀಗಾಗಿ ರೈತರು ಸಿಸಿ ಕ್ಯಾಮರಾ ಮೊರೆ ಹೋಗಿದ್ದಾರೆ.
ಮಧ್ಯಪ್ರದೇಶದ ಚಿಂದವಾಡ ಜಿಲ್ಲೆಯ ಮೊಹ್ಖೇದ್ ಪ್ರದೇಶದ ಐದು ಗ್ರಾಮಗಳ ಹೊಲದಲ್ಲಿನ ಬೆಳ್ಳುಳ್ಳಿ ಬೆಳೆ ಕಳ್ಳತನವಾಗಿದೆ. ಈ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆ, ಇತರ ಕೆಲವು ರೈತರು ಎಚ್ಚರಿಕೆಯಿಂದ ತಮ್ಮ ಸಿಸಿಟಿವಿ ಕ್ಯಾಮೆರಾಗಳನ್ನು ಮುಂಭಾಗದಲ್ಲಿ ಸ್ಥಾಪಿಸಿದರು.
“ಈ ಕ್ಯಾಮೆರಾಗಳು ಸೌರಶಕ್ತಿಯಿಂದ ಚಾಲಿತವಾಗಿವೆ… ಏನಾದರೂ ಅನುಮಾನಾಸ್ಪದವಾಗಿ ಕಂಡರೆ ಅಲಾರಾಂ ಅನ್ನು ಧ್ವನಿಸುತ್ತದೆ. ಕ್ಯಾಮೆರಾಗಳನ್ನು ಅಳವಡಿಸಿದ ನಂತರ ಕಳ್ಳತನ ಕಡಿಮೆಯಾಗಿದೆ’’ ಎನ್ನುತ್ತಾರೆ ರೈತ ರಾಹುಲ್ ದೇಶಮುಖ.
ಕಳೆದ 60 ವರ್ಷಗಳಲ್ಲಿ ಬೆಳ್ಳುಳ್ಳಿ ಬೆಲೆ ಇಷ್ಟು ಏರಿಕೆಯಾಗಿಲ್ಲ. ಆದರೆ ಈಗ ಬೆಳ್ಳುಳ್ಳಿ ಕೃಷಿ ಮಾಡಿದ ಶ್ರೀಮಂತ ರೈತರೂ ತಮ್ಮ ಬೆಳೆ ಕಳ್ಳತನವಾಗಬಹುದೆಂಬ ಭಯದಲ್ಲಿದ್ದಾರೆ.
ಬೆಳ್ಳುಳ್ಳಿ ಇಲ್ಲದ ಮನೆಯೇ ಇಲ್ಲ ಎಂದರೆ ಅತಿಶಯೋಕ್ತಿಯಲ್ಲ. ಬೆಳ್ಳುಳ್ಳಿಯನ್ನು ಆಹಾರ ತಯಾರಿಕೆಯಲ್ಲಿ ಮಾತ್ರವಲ್ಲದೆ ಆಯುರ್ವೇದದಲ್ಲಿ ಔಷಧದಲ್ಲಿಯೂ ಬಳಸಲಾಗುತ್ತದೆ. ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿಯ ಪೂರೈಕೆ ಶೇ.50 ರಷ್ಟು ಕುಸಿದಿದೆ. ಇದರಿಂದ ಕೆಜಿ ಬೆಳ್ಳುಳ್ಳಿಗೆ 350 ರೂ. ಚಿಲ್ಲರೆ ಮಾರುಕಟ್ಟೆಯಲ್ಲಿ 400 ರೂ.ಗೆ ತಲುಪಿದೆ.
ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಗಾರ್ಲಿಕ್ ಕಬಾಬ್ ಟ್ರೆಂಡ್ ಆಗ್ತಿದೆ.. ಆದ್ರೆ ಬೆಳ್ಳುಳ್ಳಿ ಬೆಲೆ ತುಂಬಾನೇ ಏರಿದೆ. ಇದು ಬೆಳ್ಳುಳ್ಳಿ ಬೆಳೆಯುವ ರೈತರಿಗೆ ಸಂತಸ ತಂದಿದೆ. ಇದಲ್ಲದೆ, ಅವರು ತಮ್ಮ ಬೆಳೆಗಳನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದಾರೆ.
‘ದಂಗಲ್’ ನಟಿ ಸುಹಾನಿ ಭಟ್ನಾಗರ್ ನಿಧನ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
