​ನವದೆಹಲಿ:ಸೋಮವಾರದಿಂದ ದೆಹಲಿಯ ಜಾಫ್ರಾಬಾದ್​ನಲ್ಲಿ ನಡೆಯುತ್ತಿರುವ ಸಿಎಎ ವಿರೋಧಿ ಪ್ರತಿಭಟನೆಯು ಹಿಂಸಾತ್ಮಕ ತಿರುವು ಪಡೆದುಕೊಂಡಿರುವುದಕ್ಕೆ ಕಾರಣರಾಗಿರುವವರು ಕಪಿಲ್​ ಮಿಶ್ರಾ ವಿರುದ್ಧ ಸೂಕ್ತ ಕ್ರಮ ತೆಗೆದಕೊಳ್ಳಬೇಕು ಎಂದು ಬಿಜೆಪಿ ಸಂಸದ ಗೌತಮ್​ ಗಂಭೀರ್​ ಹೇಳಿದ್ದಾರೆ.
ಘಟನೆಯ ಕುರಿತಾಗಿ ಮಾತನಾಡಿರುವ ಅವರು, “ಪ್ರಚೋದನಾಕಾರಿ ಹೇಳಿಕೆ ನೀಡಿರುವುದು ಯಾರೇ ಆಗಲೀ, ಯಾವುದೇ ಪಕ್ಷದವರಾಗಿರಲಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲೇಬೇಕು. ರಾಜ್ಯದಲ್ಲಿರುವ ಪೊಲೀಸರಿಗೇ ಸುರಕ್ಷತೆ ಇಲ್ಲವೆಂದಾದಮೇಲೆ ಜನರ ಪರಿಸ್ಥಿತಿ ಹೇಗಿರಬೇಕು ಎನ್ನುವುದನ್ನು ನಾವು ಗಮನಿಸಬೇಕು” ಎಂದು ಅವರು ಹೇಳಿದ್ದಾರೆ.
ಭಾನುವಾರದಂದು ಜಾಫ್ರಾಬಾದ್​ನ ಸಭೆಯೊಂದರಲ್ಲಿ ಭಾಗವಹಿಸಿದ ಬಿಜೆಪಿಯ ನಾಯಕ ಕಪಿಲ್​ ಮಿಶ್ರಾ, ಜಾಫ್ರಾಬಾದ್​ನಲ್ಲಿರುವ 35 ಲಕ್ಷ ಜನರನ್ನು ಕತ್ತರಿಸಲೆಂದು ಪ್ರತಿಭಟನಾಕಾರರು ರಸ್ತೆಗಳನ್ನು ಸ್ಥಗಿತಗೊಳಿಸುತ್ತಿದ್ದಾರೆ. ಪೊಲೀಸರು ಇನ್ನು ಮೂರು ದಿನಗಳಲ್ಲಿ ಪ್ರತಿಭಟನಾಕಾರರನ್ನು ಚದುರಿಸಬೇಕು ಎಂದು ಒತ್ತಾಯಿಸಿದ್ದರು. ಇದರಿಂದಾಗಿ ಸಿಟ್ಟಿಗೆದ್ದ ಸಿಎಎ ವಿರೋಧಿ ಹೋರಾಟಗಾರರು ಸೋಮವಾರದಂದು ತಮ್ಮ ಹೋರಾಟವನ್ನು ಇನ್ನೊಂದು ದಿಕ್ಕಿಗೆ ಕರೆದೊಯ್ದು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಇಟ್ಟು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಈವರೆಗೆ ಒಬ್ಬ ಪೊಲೀಸ್​ ಪೇದೆ ಸೇರಿದಂತೆ 7 ಮಂದಿ ಮೃತರಾಗಿದ್ದಾರೆ. 50ಕ್ಕೂ ಹೆಚ್ಚು ಜನರು ಗಾಯಾಳುಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 6 =
Remember me
