ರಾಜಸ್ಥಾನ:ರಾಜಸ್ಥಾನದ ರಾಜಕಾರಣದಲ್ಲಿ ಮಂಗಳವಾರ (ನ.1) ಒಂದು ಅಪರೂಪದ ಘಟನೆ ನಡೆದಿದೆ. ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್ ಮತ್ತು ಪ್ರಧಾನಿ ಮೋದಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೂ ಆಶ್ಚರ್ಯದ ವಿಷಯ ಏನೆಂದರೆ ಪ್ರಧಾನಿ, ಗೆಹ್ಲೋಟ್​ರನ್ನು ಹೊಗಳಿದ್ದಾರೆ!
ಮಾನ್​ಘರ್​ ಧಾಮ್​ ಎನ್ನುವಲ್ಲಿ ನವೆಂಬರ್ 17, 1913ರಲ್ಲಿ ಜಲಿಯನ್​ವಾಲ ಬಾಗ್​ನಂತೆಯೆ ಬ್ರಿಟಿಷರಿಂದ ನರಸಂಹಾರ ನಡೆದಿತ್ತು. ಅಂದು ಭಿಲ್​ ಸಮುದಾಯದ 1500 ಜನರನ್ನು ಕೊಲ್ಲಲಾಗಿತ್ತು. ಈ ಘಟನೆಯ ನೆನಪಿಗೆ ಮಾನ್​ಘರ್​ ಧಾಮ್ಅನ್ನು ಮೋದಿ ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿದರು.
ಈ ಕಾರ್ಯಕ್ರಮದಲ್ಲಿ ರಾಜಸ್ಥಾನ ಸಿಎಂ ಮತ್ತು ಪ್ರಧಾನಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಗೆಹ್ಲೋಟ್​ರ ಕುರಿತು ‘ನಾನು ಮತ್ತು ಅಶೋಕ್​ ಜಿ ಮುಖ್ಯಮಂತ್ರಿಗಳಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ಇವರು ನುರಿತ ರಾಜಕಾರಣಿ ಆಗಿದ್ದು ಇಡೀ ವೇದಿಕೆಯಲ್ಲಿ ಅತ್ಯಂತ ಹಿರಿಯ ವ್ಯಕ್ತಿ’ ಎಂದು ಹೇಳಿದ್ದಾರೆ.
ಹಿಂದೆ ಗೆಹ್ಲೋಟ್​ ‘ನಮ್ಮ ಪ್ರಧಾನಿ ವಿದೇಶಕ್ಕೆ ಹೋದಾಗ ಅವರಿಗೆ ಉತ್ತಮ ಸ್ಥಾನಮಾನ ಸಿಗುತ್ತಿದೆ. ಏಕೆಂದರೆ ಅವರು ಪ್ರಜಾಪ್ರಭುತ್ವ ಆಳವಾಗಿ ಬೇರೂರಿರುವ, ಗಾಂಧಿ ಹುಟ್ಟಿದ ದೇಶದ ಪ್ರಧಾನಿಯಾಗಿದ್ದಾರೆ. ಜಗತ್ತು, ಆ ದೇಶದ ಪ್ರಧಾನಿ ತಮ್ಮ ಬಳಿಗೆ ಬರುತ್ತಿದ್ದಾರೆ ಎಂದು ಹೆಮ್ಮೆಪಡುತ್ತೆ’ ಎಂದಿದ್ದರು.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × one =
Remember me
