ಮುಂಬೈ:ರಿಲಯನ್ಸ್ ರೀಟೇಲ್​​ನ ಇ-ಮಾರ್ಕೆಟ್ ಪ್ಲೇಸ್ ಅಂಗವಾದ ಜಿಯೋಮಾರ್ಟ್​​​ ಸೋಮವಾರ (ಜೂನ್ 24) ಮಹತ್ತರವಾದ ಸಹಭಾಗಿತ್ವವನ್ನು ಘೋಷಣೆ ಮಾಡಿದೆ. ಸಣ್ಣ- ಪ್ರಮಾಣದ ಮಾರಾಟಗಾರರು, ಕುಶಲಕರ್ಮಿಗಳು ಹಾಗೂ ಸಾಂಪ್ರದಾಯಿಕರು ಒಳಗೊಂಡಂತೆ ಅವರ ಬೆಳವಣಿಗೆಗೆ ಸಹಕರಿಸಬೇಕು ಹಾಗೂ ಅವರನ್ನು ಸಬಲಗೊಳಿಸಬೇಕು ಎಂಬ ದೃಷ್ಟಿಕೋನದ ಹಿನ್ನೆಲೆಯಲ್ಲಿ JASCOLAMPF ಹಾಗೂ JHARCRAFT ಜತೆಗೆ ಸಹಭಾಗಿತ್ವ ವಹಿಸಲಾಗಿದೆ.
ಇದನ್ನು ಓದಿ:ವೀರಶೈವವು ಬಸವಪೂರ್ವಯುಗದ ಸನಾತನ ಧರ್ಮ; ಸಂಶೋಧಕ ಡಾ.ವೀರಭದ್ರಯ್ಯ ಪ್ರತಿಪಾದನೆ
ಅಂದಹಾಗೆ ಮೊದಲನೆಯದು ಜಾರ್ಖಂಡ್​​​ನ ರಾಜ್ಯ ಸರ್ಕಾರಿ ಎಂಪೋರಿಯಂ ಹಾಗೂ ಎರಡನೆಯದು ಜಾರ್ಖಂಡ್ ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುವಂಥದ್ದು. ಜಾರ್ಖಂಡ್​​ನಲ್ಲಿನ ಕುಶಲಕರ್ಮಿಗಳ ಬದುಕಿನಲ್ಲಿ ಬಹುದೊಡ್ಡ ಬದಲಾವಣೆಯನ್ನು ತರುವ ನಿಟ್ಟಿನಲ್ಲಿ ಈ ಜಂಟಿ ಉಪಕ್ರಮವು ಬಹಳ ದೊಡ್ಡ ಮೈಲುಗಲ್ಲಾಗಿದೆ. ಹಾಗೂ ಇದರೊಂದಿಗೆ ಜಿಯೋಮಾರ್ಟ್ ಮೂಲಕ ದೇಶದಾದ್ಯಂತ ತಲುಪುವುದಕ್ಕೆ ಅನುಕೂಲ ಆಗುತ್ತದೆ.
ಜಾರ್ಖಂಡ್​​​ನ ಪಟ್ಟಣ ಮತ್ತು ನಗರಗಳಾದ ಗುಮ್ಲಾ, ಸರೈಕೆಲಾ ಹಾಗೂ ಪಲಮೌ ಸೇರಿದಂತೆ ಇತರೆಡೆಗಳಿಂದ ಅಪಾರ ಸಂಖ್ಯೆಯ ಕುಶಲಕರ್ಮಿಗಳನ್ನು ಜಿಯೋಮಾರ್ಟ್​ ವೇದಿಕೆಗೆ ಕರೆತರುವಲ್ಲಿ ಈ ಸಹಯೋಗ ನೆರವಾಗಿದೆ. ಇದೀಗ ಈ ಕುಶಲಕರ್ಮಿಗಳು ತನ್ನ ಅದ್ಭುತ ಕರಕುಶಲ ವಸ್ತುಗಳನ್ನು ಪ್ರದರ್ಶಿಸುವುದಕ್ಕೆ ಮಾತ್ರವಲ್ಲ, ಅದರ ಜತೆಗೆ ದೇಶಾದ್ಯಂತ ಇರುವಂಥ ಗ್ರಾಹಕರನ್ನು ತಲುಪುವುದಕ್ಕೆ ಮತ್ತು ತಮ್ಮ ವ್ಯಾಪಾರ- ವ್ಯವಹಾರವನ್ನು ವಿಸ್ತರಿಸುವುದಕ್ಕೆ ಸಹಾಯ ಆಗುತ್ತದೆ.
ಜಾರ್ಖಂಡ್​​ ರಾಜ್ಯ ಸರ್ಕಾರದ ಎಂಪೋರಿಯಂ ಅನ್ನು JASCOLAMPF ಎಂದು ಕರೆಯಲಾಗುತ್ತದೆ. ಇದು ತಮ್ಮ ವ್ಯವಹಾರವನ್ನು ಆರಂಭಿಸುವುದಕ್ಕೆ ಯಾವುದೇ ಸಮಸ್ಯೆ ಆಗದಂತೆ, ಗ್ರಾಹಕರಿಗೆ ಸಂಪೂರ್ಣ ಪಾರದರ್ಶಕವಾದಂಥ ಹಾಗೂ ಜತೆಗೆ ಮೀಸಲು ಇರಿಸಿದಂಥ ಮಾರ್ಕೆಟಿಂಗ್ ಬೆಂಬಲದೊಂದಿಗೆ ಲಭ್ಯವಿರುತ್ತದೆ. ಇಲ್ಲಿ ಈ ಸಹಯೋಗದ ಮೂಲಕ ಜಿಯೋಮಾರ್ಟ್​​ನ ಲಕ್ಷಾಂತರ ಸಂಖ್ಯೆಯ ಗ್ರಾಹಕರು ಜಿಐ- ಟ್ಯಾಗ್ ಆದಂತ ಮರದ ಉತ್ಪನ್ನಗಳು, ಬಿದಿರಿನ ವಸ್ತುಗಳು, ಧೋಕ್ರಾ ಕಲಾಕೃತಿಗಳು, ಟೆರಾಕೋಟಾ ವಸ್ತುಗಳು, ಲ್ಯಾಕ್ ಬಳೆಗಳು, ಹತ್ತಿ ಕೈಮಗ್ಗ, ಅಪ್ಲಿಕ್ ವರ್ಕ್, ಝರ್ಡೋಜಿ ವರ್ಕ್, ತಸರ್ ಕೈ ಮಗ್ಗ ಸೀರೆಗಳು, ಪುರುಷರ ಅಂಗಿಗಳು, ಹೊಲಿಗೆ ಹಾಕಿರದಂಥ ಡ್ರೆಸ್ ಮಟಿರೀಯಲ್​​ಗಳು, ಕರಕುಶಲ ಬ್ಯಾಗ್, ಬೆಡ್ ಶೀಟ್​​ಗಳು, ಪೇಂಟಿಂಗ್​​ಗಳು, ಗೃಹಾಲಂಕಾರ ವಸ್ತುಗಳು, ಇನ್ನೂ ಹಲವು ಕೈಯಿಂದ ಸಿದ್ಧಪಡಿಸಲಾದ ಹಲವು ವಿಧದ ಕಲಾ ವಸ್ತುಗಳು ದೊರೆಯುತ್ತವೆ. ಇದು ಸ್ಥಳೀಯ ಕರಕುಶಲತೆ ಜತೆಗೆ ನಿಕಟ ಬಂಧವನ್ನು ಸೃಷ್ಟಿಸುವುದಲ್ಲದೆ “ವೋಕಲ್ ಫಾರ್ ಲೋಕಲ್” ಎಂಬ ಸ್ಥಳೀಯ ವಸ್ತುಗಳಿಗೆ ಉತ್ತೇಜನ ನೀಡಬೇಕು ಎಂಬ ಪ್ರಧಾನಿ ಮೋದಿ ಅವರ ಆತ್ಮನಿರ್ಭರ್ ಭಾರತ್ ದೃಷ್ಟಿಕೋನದೊಂದಿಗೆ ಸಾಗುತ್ತದೆ.
ಜಾರ್ಖಂಡ್ ಸ್ಟೇಟ್ ಕೋ-ಆಪರೇಟಿವ್ ಲ್ಯಾಕ್ ಮಾರ್ಕೆಟಿಂಗ್ ಅಂಡ್ ಪ್ರೊಕ್ಯೂರ್‌ಮೆಂಟ್ ಫೆಡರೇಷನ್ ಲಿಮಿಟೆಡ್ (JASCOLAMPF) ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಕುಮಾರ್ ಸಿಂಗ್ ಅವರು ಮಾತನಾಡಿ, “ಜಾರ್ಖಂಡ್‌ನ ಕರಕುಶಲ ಕಲಾವಿದರು, ಕೈಮಗ್ಗ ನೇಕಾರರು ಮತ್ತು ಕುಶಲಕರ್ಮಿಗಳು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಾಕಾರಗೊಳಿಸುವ ಅದ್ಭುತ ಕೌಶಲಗಳನ್ನು ಹೊಂದಿದ್ದಾರೆ. ಅವರೊಂದಿಗಿನ ಸಹಯೋಗವು ಜಾರ್ಖಂಡ್‌ನ ರೋಮಾಂಚಕ ಕರಕುಶಲತೆ ಮತ್ತು ಕಾಲಾತೀತ ಸಂಪ್ರದಾಯಗಳಲ್ಲಿ ಆಳವಾದ ತೊಡಗುಕೊಳ್ಳುವಿಕೆಗೆ ಭರವಸೆ ನೀಡುತ್ತದೆ. ಇದು ಜಾರ್ಖಂಡ್‌ನ ಇತರ ಎಂಎಸ್​​ಎಂಇ (ಕಿರು, ಸಣ್ಣ ಮತ್ತು ಮಧ್ಯಮ ಉದ್ಯಮಗಳು) ತಯಾರಕರಿಗೆ ಸಹ ಪ್ರಯೋಜನಗಳನ್ನು ನೀಡುತ್ತದೆ. ಆದರೂ ಹಂಚಿಕೆಯ ಜ್ಞಾನ ಮತ್ತು ಅವಕಾಶಗಳ ಮೂಲಕ, ಈ ಬಾಂಧವ್ಯದ ಬೆಳವಣಿಗೆ, ನಾವೀನ್ಯತೆ ಮತ್ತು ಜಾರ್ಖಂಡ್‌ನ ಗುರುತನ್ನು ವ್ಯಾಖ್ಯಾನಿಸುವ ಸಂಕೀರ್ಣವಾದ ಕರಕುಶಲತೆಗೆ ಗಹನವಾದ ಮೆಚ್ಚುಗೆಯನ್ನು ನೀಡುತ್ತದೆ” ಎಂದರು.
ಜಾರ್ಖಂಡ್ ಸಿಲ್ಕ್ ಟೆಕ್ಸ್​​​ಟೈಲ್​​ ಮತ್ತು ಕರಕುಶಲ ಅಭಿವೃದ್ಧಿ ನಿಗಮ ಲಿಮಿಟೆಡ್ (JHARCRAFT)ನ ಉಪಪ್ರಧಾನ ವ್ಯವಸ್ಥಾಪಕರಾದ ಅಶ್ವಿನಿ ಸಹಾಯ್ ಅವರು ಮಾತನಾಡಿ, “ದೇಶೀಯ ಉತ್ಪನ್ನಗಳ ವಿಶಿಷ್ಟ ಅಗತ್ಯಗಳನ್ನು ಅರ್ಥ ಮಾಡಿಕೊಳ್ಳುವ ಜಿಯೋಮಾರ್ಟ್ ನಂತಹ ಸ್ಥಳೀಯ ವೇದಿಕೆಯಲ್ಲಿ ಪ್ರಾರಂಭಿಸಲು ಉತ್ಸುಕರಾಗಿದ್ದೇವೆ. ಈ ಬಿಡುಗಡೆಯು ಜಾರ್ಖಂಡ್‌ನ ವೈವಿಧ್ಯಮಯ ಕಲಾ ಪ್ರಕಾರಗಳೊಂದಿಗೆ ಜಿಯೋಮಾರ್ಟ್ ಮಾರುಕಟ್ಟೆಯನ್ನು ಶ್ರೀಮಂತಗೊಳಿಸುವ ಬದ್ಧತೆಯ ಸಂಕೇತವಾಗಿದೆ. ಈ ಮೂಲಕ ಕುಶಲಕರ್ಮಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಕಾಪಾಡುತ್ತದೆ” ಎಂದರು.
ಜಿಯೋಮಾರ್ಟ್ 2022ರಲ್ಲಿ ಪ್ರಾರಂಭವಾದಗಿನಿಂದ ದೇಶವ್ಯಾಪಿ 20 ಸಾವಿರ ಕುಶಲಕರ್ಮಿಗಳು ಮತ್ತು ನೇಕಾರರಿಗೆ ಬಲ ತುಂಬಿದೆ. ಇಂಥ ಸರ್ಕಾರಿ ಸಂಸ್ಥೆಗಳ ಜತೆಗೆ ಸಹಭಾಗಿತ್ವ ವಹಿಸುವ ಮೂಲಕ ಡಿಜಿಟಲ್ ವಿಭಜನೆಯಿಂದ ಸೃಷ್ಟಿ ಆಗಿರುವ ಕಂದಕದ ಮಧ್ಯೆ ಸೇತುವೆ ನಿರ್ಮಿಸುವುದಕ್ಕೆ ಹಾಗೂ ಕುಶಲಕರ್ಮಿ ಸಮುದಾಯದ ಏಳಿಗೆಗೆ ಸಹಕಾರಿ ಆಗುತ್ತದೆ. ಕರಕುಶಲ ಮೇಳದಂಥ ಉಪಕ್ರಮಗಳು ಮತ್ತು ಇತರ ಕ್ರಮಗಳು ಸ್ಥಳೀಯ ಕಲೆಯನ್ನು ಪ್ರೋತ್ಸಾಹಿಸುವ ಬದ್ಧತೆಯನ್ನು ಒತ್ತಿ ಹೇಳುತ್ತದೆ.
ಚಿಕನ್​​, ಫಿಶ್​​ ಕಬಾಬ್​ನಲ್ಲಿ ಕೃತಕ ಬಣ್ಣ ಬಳಕೆಗೆ ನಿಷೇಧ; ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
