ನವದೆಹಲಿ:ಲಾಕ್​ಡೌನ್​ನಿಂದಾಗಿ ಸದ್ಯ ಮನೆಯಲ್ಲೇ ಬಂದಿಗಳಾಗಿರುವ ಉದ್ಯೋಗಿಗಳು, ಲಾಕ್​ಡೌನ್​ ತೆರೆದರೆ ಸಾಕು. ಕಚೇರಿಗೆ ಹೋಗಿ ಕೆಲಸ ಮಾಡಬಹುದು. 8 ತಾಸು ಕೆಲಸ ಮಾಡಿ ಬಂದು, ಎಂದಿನಂತೆ ಮೋಜು-ಮಸ್ತಿ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ. ಆದರೆ ಇವರೆಲ್ಲರ ಲೆಕ್ಕಾಚಾರ ಉಲ್ಟಾ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಲಾಕ್​ಡೌನ್​ನಿಂದಾಗಿ ಸಾಕಷ್ಟು ಕಾರ್ಮಿಕರು, ದಿನಗೂಲಿ ನೌಕರರು ಸ್ವಂತ ಊರುಗಳಿಗೆ ತೆರಳಿದ್ದಾರೆ. ಲಾಕ್​ಡೌನ್​ ತೆರವಾದ ಬಳಿಕ ಇವರೆಲ್ಲರೂ ತಕ್ಷಣವೇ ಮರಳುವುದು ಅನುಮಾನ. ಹಾಗಾಗಿ ಕಾರ್ಮಿಕರ ಕೊರತೆ ಉಂಟಾಗುವ ಸಾಧ್ಯತೆ ಇದೆ. ಜತೆಗೆ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕಾಗಿರುವುದರಿಂದ, ಸರ್ಕಾರ ಇದೀಗ ಕೆಲಸದ ಅವಧಿಯನ್ನು 8 ಗಂಟೆಯ ಬದಲು 12 ಗಂಟೆಗೆ ಹೆಚ್ಚಿಸುವ ಮೂಲಕ ಕಾರ್ಮಿಕರ ಕೊರತೆ ಸಮಸ್ಯೆ ನೀಗಿಸಲು ನಿರ್ಧರಿಸಿದೆ. ಈ ಸಂಬಂಧ ಅದು ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ.
ಉದ್ಯೋಗದಾತರ ಸಂಘಟನೆಗಳು ಮತ್ತು ಕೈಗಾರಿಕೋದ್ಯಮಿಗಳು ಕಾರ್ಮಿಕರ ಕೊರತೆ ನೀಗಿಸುವ ಉದ್ದೇಶದಿಂದ ಕೆಲಸದ ಅವಧಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಇದನ್ನು ಆಧರಿಸಿ, ಲಾಕ್​ಡೌನ್​ ತೆರವುಗೊಳಿಸಿದ ನಂತರದಲ್ಲಿ ಕೆಲಸದ ಅವಧಿಯನ್ನು ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ರಾಜ್ಯ ಸರ್ಕಾರಗಳಿಗೆ ನಿರ್ಧಾರದ ಅಧಿಕಾರ: ಕೆಲಸದ ಅವಧಿಯನ್ನು 8ರಿಂದ 12 ತಾಸಿಗೆ ಹೆಚ್ಚಿಸುವ ನಿರ್ಧಾರವನ್ನು ರಾಜ್ಯ ಸರ್ಕಾರಗಳಿಗೆ ಬಿಡಲಾಗುತ್ತಿದೆ. ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ವಾತಾವರಣವನ್ನು ಆಧರಿಸಿ ಕಾರ್ಮಿಕ ಇಲಾಖೆ ವತಿಯಿಂದ ಬಿಡುಗಡೆ ಮಾಡಲಾಗುವ ನಿರ್ಧಾರವನ್ನು ಅನುಷ್ಠಾನಗೊಳಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ಪ್ರದತ್ತಗೊಳಿಸಲಾಗುತ್ತಿದೆ.
ಲಾಕ್​ಡೌನ್​ಗೆ ಹೇಳಿ ಧನ್ಯವಾದಗಳು! ಇಳಿಮುಖವಾಗುತ್ತಿದೆ ಕರೊನಾ ವೈರಸ್​ ಸೋಂಕು ಹರಡುವ ಪ್ರಮಾಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
