ಬೆಂಗಳೂರು:ಕೇರಳದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ 14 ಕೋಟಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದ ಕೋರ್ಟ್ ವಿಚಾರಣೆಯನ್ನು ಕರ್ನಾಟಕಕ್ಕೆ ವರ್ಗಾಯಿಸುವಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.
ಪ್ರಕರಣದ ಮೇಲೆ ರಾಜಕೀಯ ಪ್ರಭಾವ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ತ್ವರಿತ ಹಾಗೂ ಪಾರದರ್ಶಕ ವಿಚಾರಣೆ ನಡೆಯುವ ದೃಷ್ಟಿಯಿಂದ ಬೆಂಗಳೂರು ವಿಶೇಷ ಕೋರ್ಟ್​ಗೆ ವರ್ಗಾವಣೆ ಮಾಡುವಂತೆ ಮನವಿ ಮಾಡಿದೆ. ಸ್ಯಾಂಡಲ್​ವುಡ್ ಡ್ರಗ್ಸ್ ದಂಧೆಯಲ್ಲಿ ಬಂಧಿತರಾಗಿರುವವರ ಜತೆ ಕೇರಳದ ಸ್ಮಗ್ಲಿಂಗ್ ರಾಣಿ ಎಂದೇ ಕುಖ್ಯಾತಿಯಾಗಿರುವ ಸ್ವಪ್ನಾ ಸುರೇಶ್ ಗ್ಯಾಂಗ್ ಸಂಪರ್ಕದಲ್ಲಿತ್ತು. ಅಷ್ಟೇ ಅಲ್ಲ ಚಿನ್ನದ ಕಳ್ಳಸಾಗಣೆಗೆ ಚಂದನವನದ ಡ್ರಗ್ಸ್ ದಂಧೆಯಲ್ಲಿರುವ ಪ್ರಭಾವಿಗಳೂ ಸ್ವಪ್ನಾಗೆ ನೆರವು ನೀಡಿದ್ದರು ಎಂಬ ಸಂಗತಿ ಈ ಹಿಂದೆ ಇಡಿ ಅಧಿಕಾರಿಗಳ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈಗ ಇಡಿ ಅಧಿಕಾರಿಗಳು, ಇಡೀ ಪ್ರಕರಣದ ವಿಚಾರಣೆಯನ್ನು ಕರ್ನಾಟಕಕ್ಕೆ ವರ್ಗಾಯಿಸಲು ಕೋರಿರುವುದರಿಂದ ಸುಪ್ರೀಂಕೋರ್ಟ್ ಪುರಸ್ಕರಿಸಿದರೆ ಸ್ಯಾಂಡಲ್​ವುಡ್ ಡ್ರಗ್ಸ್ ದಂಧೆಯ ರಹಸ್ಯ ಮಾಹಿತಿಗಳೂ ವಿಚಾರಣೆ ವೇಳೆ ಹೊರಬರುವ ನಿರೀಕ್ಷೆ ಇದೆ.
ಜು.5ರಂದು ತಿರುವನಂತಪುರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 14.82 ಕೋಟಿ ರೂ ಮೌಲ್ಯದ 30 ಕೆ.ಜಿ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದರು. ತಿರುವನಂತಪುರಂನಲ್ಲಿರುವ ಯುಎಇ ಕಾನ್ಸುಲೇಟ್ ಕಚೇರಿಯ ವಿಳಾಸ ಹೊಂದಿದ್ದ ಆ ಪಾರ್ಸಲ್ ಅನ್ನು ಯುಎಇಯಿಂದ ರಾಜತಾಂತ್ರಿಕ ಮಾರ್ಗದ ಮೂಲಕ ಕಳುಹಿಸಿರುವುದು ಬಹಿರಂಗಗೊಂಡಿತ್ತು. ಎನ್​ಐಎ ತನಿಖೆ ನಡೆಸಿದಾಗ ಗೋಲ್ಡ್ ಸ್ಮಗ್ಲಿಂಗ್​ನಿಂದ ಬಂದ ಹಣವನ್ನು ಉಗ್ರ ಚಟುವಟಿಕೆಗೆ ಬಳಸುತ್ತಿರುವ ವಿಚಾರವೂ ದೃಢಪಟ್ಟಿದೆ. ಚಿನ್ನ ಸ್ಮಗ್ಲಿಂಗ್ ಪ್ರಕರಣದಲ್ಲಿ ಸ್ವಪ್ನಾ ಸುರೇಶ್, ಸರಿತಾ, ಫಾಜಿಲ್ ಫರೀದ್ ಮತ್ತು ಸಂದೀಪ್ ನಾಯರ್ ಪ್ರಮುಖ ಆರೋಪಿಗಳಾಗಿದ್ದಾರೆ. ಇವರ ವಿಚಾರಣೆ ವೇಳೆ ಸ್ಯಾಂಡಲ್​ವುಡ್ ಡ್ರಗ್ಸ್ ಮಾಫಿಯಾ ಜತೆ ನಂಟಿರುವ ವಿಚಾರವನ್ನೂ ಬಾಯ್ಬಿಟ್ಟಿದ್ದರು. ಅಲ್ಲದೆ, ಇದೇ ಜು.12ರಂದು ಪ್ರಕರಣದ ಸಂಬಂಧ ಬೆಂಗಳೂರು ಸೇರಿ ವಿವಿಧೆಡೆ ಹೊಂದಿರುವ 16 ಕೋಟಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿಯನ್ನು ಪತ್ತೆಹಚ್ಚಿದ್ದ ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು.
ಕೊಚ್ಚಿ ಕೋರ್ಟ್​ಗೆ ಹೇಳಿದ್ದ ಇಡಿ: ಚಿನ್ನದ ಸ್ಮಗ್ಲಿಂಗ್ ಹಗರಣ ಬೆಳಕಿಗೆ ಬಂದ ಸಂದರ್ಭದಲ್ಲಿ ಪ್ರಮುಖ ಆರೋಪಿಗಳಾದ ಸ್ವಪ್ನಾ ಸುರೇಶ್ ಹಾಗೂ ಸಂದೀಪ್ ನಾಯರ್ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ಫೋನ್ ಕರೆ ಬೆನ್ನತ್ತಿದ್ದ ಎನ್​ಐಎ ತಂಡ ಕೋರಮಂಗಲದ ಖಾಸಗಿ ಹೋಟೆಲ್​ವೊಂದರಲ್ಲಿ ಬಂಧಿಸಿತ್ತು. ಇಡಿ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡ ನಂತರ ಬೆಂಗಳೂರು ಡ್ರಗ್ಸ್ ದಂಧೆಗೂ ಚಿನ್ನ ಸ್ಮಗ್ಲಿಂಗ್​ಗೂ ನಂಟಿದೆ ಎಂಬುದು ಗೊತ್ತಾಗಿತ್ತು. ಕೊಚ್ಚಿಯ ವಿಶೇಷ ಕೋರ್ಟ್​ಗೆ ಮಾಹಿತಿ ಈ ಹಿಂದೆ ಮಾಹಿತಿ ನೀಡಿದ್ದರು.
ಆತ್ಮಹತ್ಯೆಗೆ ಶರಣಾದ ಸ್ಟಾಫ್ ನರ್ಸ್​; ಡೆತ್​ ನೋಟ್​​​ನಲ್ಲಿತ್ತು ಸಾವಿಗೆ ಕಾರಣ

‘ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುವುದು’; ರಾಜಕೀಯ ಗುರು ನೆನೆದು ಗದ್ಗದಿತರಾದ ಶಾಸಕ ರೇಣುಕಾಚಾರ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
