ಗುವಾಹಟಿ:ಅಸ್ಸಾಂನ ಗುವಾಹಟಿಯ ಪ್ರಸಿದ್ಧ ಕಾಮಾಕ್ಯ ದೇವಿ ದೇವಸ್ಥಾನದ ಪ್ರಮುಖ ಕಳಸವನ್ನು ಚಿನ್ನದಿಂದ ಲೇಪಿಸುವ ಕಾರ್ಯ ಪೂರ್ಣಗೊಂಡಿದ್ದು, ದೇವಸ್ಥಾನದ ಆಡಳಿತ ಮಂಡಳಿ ಅದನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಿದೆ. ಉದ್ಯಮಿ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಕಳಸಕ್ಕೆ ಚಿನ್ನ ಲೇಪನ ಮಾಡಿಸಿದ್ದು, ಇದಕ್ಕಾಗಿ ಒಟ್ಟು 19 ಕೆ.ಜಿ ಚಿನ್ನ ಬಳಸಲಾಗಿದೆ.
ಕಳಸಕ್ಕೆ ಚಿನ್ನ ಲೇಪಿಸುವ ಕಾರ್ಯಕ್ಕಾಗಿ ಕುಶಲ ಕರ್ವಿುಗಳನ್ನೂ ರಿಲಯನ್ಸ್ ಸಂಸ್ಥೆಯೇ ಕಳುಹಿಸಿತ್ತು. ಈ ವರ್ಷ ಅಕ್ಟೋಬರ್ ಮಧ್ಯದಲ್ಲಿ ಪ್ರಾರಂಭವಾಗಿದ್ದ ಕಾಮಗಾರಿ ಸಂಪೂರ್ಣ ಈಗ ಪೂರ್ಣಗೊಂಡಿದ್ದು, ಸಣ್ಣ ಸಮಾರಂಭವೊಂದರ ಮೂಲಕ ಕಳಸವನ್ನು ದರ್ಶನಕ್ಕೆ ಮುಕ್ತಗೊಳಿಸಲಾಗಿದೆ.
ಈ ಸಮಾರಂಭದಲ್ಲಿ ರಿಲಯನ್ಸ್​ನ ಕೆಲ ಅಧಿಕಾರಿಗಳು ಮಾತ್ರ ಭಾಗಿಯಾಗಿದ್ದರು ಎಂದು ದೇವಸ್ಥಾನ ಮಂಡಳಿಯ ಅಧ್ಯಕ್ಷ ಮೋಹಿತ್ ಚಂದ್ರ ಶರ್ಮಾ ಹೇಳಿದ್ದಾರೆ. ಕಾಮಾಕ್ಯ ದೇವಿ ದೇವಸ್ಥಾನ ಅಸ್ಸಾಂನಲ್ಲಿ ಅತ್ಯಂತ ಪ್ರಸಿದ್ಧವಾಗಿದ್ದು, ಪುರಾತನ 51 ಶಕ್ತಿ ಪೀಠಗಳಲ್ಲಿ ಇದೂ ಒಂದು ಎಂದು ಶರ್ಮಾ ತಿಳಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:5 × two =
Remember me
