ಹೈದರಾಬಾದ್​: ಗಣೇಶ ಹಬ್ಬಕ್ಕೆ ಸರ್ಕಾರಿ ರಜೆ ಘೋಷಣೆ ಇರುವುದು ಎಲ್ಲರಿಗೂ ಗೊತ್ತಿರುವಂಥದ್ದೇ. ಆದರೆ ಗಣೇಶ ವಿಸರ್ಜನೆಗೂ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ನಾಳೆ ಕೆಲವೆಡೆ ಸರ್ಕಾರಿ ಕಚೇರಿ, ಸಂಸ್ಥೆಗಳು ಮುಚ್ಚಿರಲಿವೆ.
ಹಾಗಂತ ಕರ್ನಾಟಕದವರು ಖುಷಿ ಪಡುವಂತಿಲ್ಲ. ಏಕೆಂದರೆ ಇಂಥದ್ದೊಂದು ಆದೇಶವನ್ನು ಹೊರಡಿಸಿರುವುದು ತೆಲಂಗಾಣ ಸರ್ಕಾರ. ಗಣೇಶ ವಿಸರ್ಜನೆಯ ಮೆರವಣಿಗೆ ಹಿನ್ನೆಲೆಯಲ್ಲಿ ಅದು ಅಲ್ಲಿನ ಕೆಲವು ನಗರಗಳಲ್ಲಿ ನಾಳೆ ಸರ್ಕಾರಿ ರಜೆ ಎಂದು ಘೋಷಿಸಿ ಆದೇಶ ಹೊರಡಿಸಿದೆ.
ಹೈದರಾಬಾದ್, ಸಿಕಂದರಾಬಾದ್, ರಂಗಾರೆಡ್ಡಿ, ಮೆಡ್ಚಲ್​-ಮಲ್ಕಜ್​ಗಿರಿ ಜಿಲ್ಲೆಗಳಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಹಿನ್ನೆಲೆಯಲ್ಲಿ ಸೆ. 9ರಂದು ಸರ್ಕಾರಿ ರಜೆ ಇರಲಿದೆ. ನಾಳೆಯ ರಜೆಗೆ ಪರ್ಯಾಯವಾಗಿ ಸೆ. 12ರಂದು ಕೆಲಸದ ದಿನವಾಗಿರಲಿದೆ ಎಂದೂ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮಳೆ ಮತ್ತಷ್ಟು ಜೋರು; ಹಲವು ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + four =
Remember me
