ಮುಂಬೈ: ಷೇರುಪೇಟೆಯಲ್ಲಿ ಹೂಡಿಕೆದಾರು ಕೇವಲ ಹದಿನೈದೇ ನಿಮಿಷದಲ್ಲಿ 12 ಲಕ್ಷ ಕೋಟಿ ರೂಪಾಯಿಗೂ ಅಧಿಕ ಹಣವನ್ನು ಕಳೆದುಕೊಂಡ ಬೆನ್ನಲ್ಲೇ, ಅದಕ್ಕೆ ಪ್ರತಿಕ್ರಿಯೆ ಎಂಬಂತೆ ಕಾಂಗ್ರೆಸ್ ಕಣ್ಮಣಿ ರಾಹುಲ್ ಗಾಂಧಿ ಟ್ವೀಟ್ ಮೂಲಕ ಗಮನಸೆಳೆದಿದ್ದಾರೆ.
ಫೆಬ್ರವರಿ 12ರಂದು ಮಾಡಿದ್ದ ಟ್ವೀಟನ್ನು ಮರುಟ್ವೀಟ್ ಮಾಡಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಕರೋನಾ ವೈರಸ್ ಬಹುದೊಡ್ಡ ಸಮಸ್ಯೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದನ್ನು ನಿರ್ಲಕ್ಷಿಸುವುದು ಪರಿಹಾರವಲ್ಲ. ಕಠಿಣ ಕ್ರಮಗಳನ್ನು ತೆಗೆದುಕೊಳ್ಳದೇ ಹೋದರೆ ಭಾರತದ ಆರ್ಥಿಕತೆ ನಾಶವಾಗಲಿದೆ. ಸರ್ಕಾರ ಇನ್ನೂ ಕೋಮಾವಸ್ಥೆಯಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಫೆ.12ರ ಟ್ವೀಟ್​ನಲ್ಲಿ ಅವರು ಹಾರ್ವರ್ಡ್ ವಿವಿಯ ಅಧ್ಯಯನ ವರದಿಯ ಲಿಂಕ್ ಅನ್ನು ಹಂಚಿಕೊಂಡಿದ್ದು, ಕರೋನಾ ವೈರಸ್ ಅತಿಯಾದ ಗಂಭೀರತೆ ಹೊಂದಿರುವ ಬೆದರಿಕೆ. ಇದು ನಮ್ಮ ಜನರಿಗೆ ಮತ್ತು ಅರ್ಥ ವ್ಯವಸ್ಥೆಗೆ ಹಾನಿ ಎಸಗಬಲ್ಲದು. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲ್ಲ ಎಂದು ನನಗನಿಸುತ್ತಿದೆ. ಕ್ಲಪ್ತ ಸಮಯಕ್ಕೆ ಸರಿಯಾದ ಕ್ರಮ ಇಲ್ಲಿ ಅವಶ್ಯವಾಗಿದೆ ಎಂದು ರಾಹುಲ್ ಗಾಂಧಿ ಹೇಳಿಕೊಂಡಿದ್ದರು.
I will keep repeating this.
The#coronavirusis a huge problem. Ignoring the problem is a non solution. The Indian economy will be destroyed if strong action is not taken. The government is in a stupor.https://t.co/SuEvqMFbQd
— Rahul Gandhi (@RahulGandhi)March 13, 2020

https://www.vijayavani.net/selloff-erodes-nearly-rs-12-lakh-crore-investor-wealth/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − six =
Remember me
