ಚಂಡೀಗಢ:ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ರೈತರ ಏಳಿಗೆಗಾಗಿ ಶ್ರಮಿಸುತ್ತಿದ್ದು, ಅವರ ಅನುಕೂಲಕ್ಕಾಗಿ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕನಿಷ್ಠ ಬೆಂಬಲ ಬೆಲೆ (MSP) ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಪ್ರಧಾನಿ ಮೋದಿ ಅವರ ಈ ಹೇಳಿಕೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಹರಿಯಾಣದ ರೇವಾರಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ರೈತರಿಗೆ ಮೋದಿ ಗ್ಯಾರಂಟಿ ನೀಡಿದ್ದೇವೆ… ಬ್ಯಾಂಕ್‌ಗಳು ಸಾಲ ನೀಡಲಿಲ್ಲ, ಆದರೆ ನಾವು ರೈತರಿಗೆ ಖಾತರಿ ನೀಡಿದ್ದೇವೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.
VIDEO | "People of Rewari love Modi a lot. In 2013, when BJP announced my name as PM candidate, then my first event was held in Rewari," says PM Modi while addressing a public gathering in Rewari, Haryana.pic.twitter.com/ez3d6h1UWu
ಇದನ್ನೂ ಓದಿ:ಆರ್​. ಅಶ್ವಿನ್​ ಎಡವಟ್ಟಿನಿಂದಾಗಿ ಟೀಂ ಇಂಡಿಯಾಗೆ ಪೆನಾಲ್ಟಿ; ತಾಳ್ಮೆ ಕಳೆದುಕೊಂಡ ಹಿಟ್​ಮ್ಯಾನ್
ಈಗ ಎಲ್ಲರೂ ಹೇಳುತ್ತಿದ್ದಾರೆ, 370ನೇ ವಿಧಿಯನ್ನು ತೆಗೆದುಹಾಕಿದ್ದವರು ಚುನಾವಣೆಯಲ್ಲಿ 370 ಸ್ಥಾನಗಳನ್ನು ಪಡೆಯುತ್ತಾರೆ. ಬಿಜೆಪಿ 370 ಸ್ಥಾನಗಳನ್ನು ಪಡೆಯಲಿದೆ ಮತ್ತು ಎನ್‌ಡಿಎ 400 ದಾಟಲಿದೆ. ಯುಎಇ ಮತ್ತು ಕತಾರ್ ಇಂದು ಭಾರತವನ್ನು ಗೌರವಿಸುತ್ತದೆ. ಈ ಗೌರವ ಪ್ರಧಾನಿಗೆ ಮಾತ್ರವಲ್ಲ, ದೇಶ ಮತ್ತು ಪ್ರತಿಯೊಬ್ಬ ನಾಗರಿಕನಿಗೂ ಸಂದ ಗೌರವವಾಗಿದೆ ಎಂದು ಹೇಳಿದ್ಧಾರೆ.
ದೇಶಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ಬೇಕಿತ್ತು. ಇಂದು ನಿಜವಾಗಿದೆ, ಕಾಂಗ್ರೆಸ್ ಎಂದಿಗೂ ದೇವಾಲಯವನ್ನು ಬಯಸುವುದಿಲ್ಲ ಏಕೆಂದರೆ ಅವರಿಗೆ ಭಗವಾನ್ ರಾಮನು ಕಾಲ್ಪನಿಕನಾಗಿದ್ದಾನೆ. ಆದರೆ ಇಂದು ಅವರೂ ಜೈ ಶ್ರೀ ರಾಮ್ ಹೇಳುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವುದನ್ನು ಕಾಂಗ್ರೆಸ್ ತಡೆದಿದೆ. ನಾನು ಅದನ್ನು ರದ್ದುಗೊಳಿಸುತ್ತೇನೆ ಎಂದು ಭರವಸೆ ನೀಡಿದ್ದೆ ಇಂದು ಇದು ಇತಿಹಾಸವಾಗಿದೆ.
ಕಾಂಗ್ರೆಸ್ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ದಾಖಲೆಯನ್ನು ಹೊಂದಿದೆ. ಇದು ವರ್ಷಗಳಿಂದ ಬದಲಾಗಿಲ್ಲ. ಏಕೆಂದರೆ ನಾಯಕರು ಅವರೇ ಮತ್ತು ಅವರು ಒಂದೇ ಕುಟುಂಬಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸ್ಟಾರ್ಟಪ್ ಅನ್ನು ಸಹ ನಿಭಾಯಿಸಲು ಸಾಧ್ಯವಿಲ್ಲ ಮತ್ತು ಅವರು ದೇಶವನ್ನು ಹೇಗೆ ನಿಭಾಯಿಸಲು ಸಾಧ್ಯ. ಅವರ ಎಲ್ಲಾ ನಾಯಕರು ಒಬ್ಬೊಬ್ಬರಾಗಿ ಪಕ್ಷವನ್ನು ತೊರೆಯುತ್ತಿದ್ದಾರೆ. ಕಾಂಗ್ರೆಸ್ ವರ್ಷಗಳ ದುರಾಡಳಿತಕ್ಕೆ ವ್ಯತಿರಿಕ್ತವಾಗಿ, ನಾವು ಬಿಜೆಪಿಯ ಉತ್ತಮ ಆಡಳಿತವನ್ನು ಹೊಂದಿದ್ದೇವೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − one =
Remember me
