ವಿಶಾಖಪಟ್ಟಣ:ಆರ್​.ಆರ್​. ವೆಂಕಟಾಪುರಂನಲ್ಲಿರವ ಎಲ್​.ಜಿ ಪಾಲಿಮರ್ಸ್​ ಕಾರ್ಖಾನೆಯಲ್ಲಿ ಸಂಭವಿಸಿದ ವಿಷಾನಿಲ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಸಿಎಂ ಜಗನ್​ಮೋಹನ್​ ರೆಡ್ಡಿ ಘೋಷಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿದ್ದು, ನೂರಾಋಉ ಜಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದ್ಲಲದೇ, ಗಂಭೀರವಾಗಿ ಅಸ್ವಸ್ಥಗೊಂಡು ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಹತ್ತು ಲಕ್ಷ ರೂ.ಗಳನ್ನು ಪಡೆಯಲಿದ್ದಾರೆ. ಇದಲ್ಲದೇ, ಆಸ್ಪತ್ರೆಗಳಿಗೆ ದಾಖಲಾಗಿ ಸಾಮಾನ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲರಿಗೂ ತಲಾ ಒಂದು ಲಕ್ಷ ರೂ.ಗಳನ್ನು ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ;ವಿಷಾನಿಲ ದುರಂತ ಸಂಭವಿಸಿದ ಬಹುರಾಷ್ಟ್ರೀಯ ಕಂಪನಿ ಎಲ್​ಜಿ ಪಾಲಿಮರ್ಸ್​ ಕಂಪನಿ ಇತಿಹಾಸ ಗೊತ್ತಾ?
ಘಟನಾ ಸ್ಥಳದಲ್ಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ವಿಷಾನಿಲದ ತೀವ್ರತೆಯನ್ನು ಕಡಿಮೆಗೊಳಿಸಲಾಗಿದೆ ಎಂದು ಡಿಜಿಪಿ ದಾಮೋದರ್​ ಗೌತಮ್​ ಸಾವಂಗ್​ ಮಾಹಿತಿ ನೀಡಿದ್ದಾರೆ.
ವಿಷಾನಿಲದಿಂದ ಅಸ್ವಸ್ಥಗೊಂಡವರು ಸಾಕಷ್ಟು ನೀರು ಕುಡಿಯುವುದರಿಂದ ಹಾಗೂ ಮುಖದ ಮೇಲೆ ಒದ್ದೆಯಾದ ಬಟ್ಟೆ ಹಾಕಿಕೊಳ್ಳುವುದರಿಂದ ಅಸ್ವಸ್ಥಗೊಳ್ಳುವುದುನ್ನು ತಡೆಯಬಹುದು. ಆಸ್ಪತ್ರೆಗೆ ದಾಖಲಾಗಿದ್ದ ಹಲವರು ಚೇತರಿಸಿಕೊಂಡು ಡಿಸ್ಚಾರ್ಜ್​ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಐದು ಹಳ್ಳಿಗಳ ಜನರು ದಿಕ್ಕೆಟ್ಟು ಓಡಿದ್ದೇಕೆ? ನಿಂತಲ್ಲಿ, ಕುಳಿತಲ್ಲಿಯೇ ಪ್ರಜ್ಞೆ ತಪ್ಪಿದ್ದೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 4 =
Remember me
