ನವದೆಹಲಿ: ರೋಗ ಲಕ್ಷಣ ಹೊಂದಿದ್ದರೂ, ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯಲ್ಲಿ ನೆಗೆಟಿವ್ ತೋರಿಸಿದರೆ ಅಂಥವರನ್ನು ಆರ್‌ಟಿ-ಪಿಸಿಆರ್ ಮೂಲಕ ಮತ್ತೊಮ್ಮ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದೆ.
ಸೋಂಕು ಹರಡುವುದನ್ನು ತಡೆಯಲು ಯಾವುದೇ ಪ್ರಕರಣಗಳು ತಪ್ಪಿಹೋಗದಂತೆ ನೋಡಿಕೊಳ್ಳಬೇಕು. ಕಡಿಮೆ ವೆಚ್ಚ ತಗಲುವುದರಿಂದ ರಾಜ್ಯಗಳು ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯನ್ನು ಹೆಚ್ಚು ನಡೆಸುತ್ತಿವೆ. ಆದರೆ ಈ ಪರೀಕ್ಷೆಗಳು ಹೆಚ್ಚಿನ ಪ್ರಮಾಣದಲ್ಲಿ ತಪ್ಪು ಫಲಿತಾಂಶ ನೀಡುತ್ತಿವೆ. ಇದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಹ ಗುರುತಿಸಿದೆ. ಹೀಗಾಗಿ ನೆಗೆಟಿವ್ ತೋರಿಸಿದ ರೋಗಲಕ್ಷಣ ಹೊಂದಿರುವವರನ್ನು ಮತ್ತೊಮ್ಮೆ ಪರೀಕ್ಷಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದನ್ನೂ ಓದಿ:ಉದ್ಬೂರು ಹಾಡಿಯಲ್ಲಿ ಆದಿವಾಸಿ ಗಿರಿಜನರಿಗೆ ಬಲೆ, ಹರಿಗೋಲು, ತಕ್ಕಡಿ ವಿತರಣೆ
ಈ ನಡುವೆ, ದೇಶದಲ್ಲಿ ಬುಧವಾರ 95,529 ಕರೊನಾ ಹೊಸ ಪ್ರಕರಣಗಳು ವರದಿಯಾಗಿವೆ. ಇವು ಈವರೆಗೆ ಒಂದೇ ದಿನದಲ್ಲಿ ಬೆಳಕಿಗೆ ಬಂದ ಗರಿಷ್ಠ ಪ್ರಕರಣಗಳಾಗಿದ್ದು, ಶೀಘ್ರದಲ್ಲೇ ಈ ಸಂಖ್ಯೆ 1 ಲಕ್ಷದ ಗಡಿ ಮುಟ್ಟುವ ಸಾಧ್ಯತೆ ಇದೆ. ಕಳೆದೊಂದು ವಾರದಿಂದಲೂ ಪ್ರತಿದಿನ 90 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ.
ಇದನ್ನೂ ಓದಿ:ಚಿನ್ನದ ತೊಟ್ಟಿಲಿನಲ್ಲಿ ಕೃಷ್ಣ: ಈಶಪ್ರಿಯ ತೀರ್ಥರಿಂದ ಲಕ್ಷ ತುಳಸಿ ಅರ್ಚನೆ
ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಸೇರಿ ಕೆಲವೇ ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಅತಿ ಹೆಚ್ಚು ಸಾವುಗಳು ಕೂಡ ಈ ರಾಜ್ಯದಲ್ಲೇ ಸಂಭವಿಸುತ್ತಿವೆ. ಬುಧವಾರ ಶೇಕಡ 7.7 ಇದ್ದ ಪಾಸಿಟಿವಿಟಿ ದರ ಗುರುವಾರ ಶೇಕಡ 8.4ಕ್ಕೆ ತಲುಪಿದೆ. ಕಳೆದ 24 ತಾಸಿನಲ್ಲಿ 11.29 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳ ಸಂಖ್ಯೆ 5,29,34,433ಕ್ಕೆ ಏರಿದೆ. (ಏಜೆನ್ಸೀಸ್)
ವಿಸ್ತರಣೆಯಾಯ್ತು ಮಾರಟೋರಿಯಂ: ಸಾಲಗಾರರನ್ನು ಪೀಡಿಸಬೇಡಿ ಎಂದ ಸುಪ್ರೀಂಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
